ಮಂಗಳೂರು: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆಯಾಗಿದೆ.
ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚಿಸಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ.
ದೇವಸ್ಥಾನದ ಆಡಳಿತ ಸ್ನಾನಘಟ್ಟದ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿದ್ದು ಇಂದೂ ಕೂಡಾ ರೆಡ್ ಅಲರ್ಟ್ ಜಾರಿಯಾಗಿದೆ. ಬಿಟ್ಟು ಬಿಡದೇ ನಿರಂತರವಾಗಿ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆ ಸುರಿಯುತ್ತಿದೆ.
ಮಳೆ ಅಬ್ಬರದ ಹಿನ್ನೆಲೆಯಲ್ಲಿ ಪುತ್ತೂರಿಗೆ 25 ಸಿಬ್ಬಂದಿಯ ಎನ್ಡಿಆರ್ಎಫ್ (NDRF) ಸಿಬ್ಬಂದಿ ಆಗಮಿಸಿದ್ದಾರೆ. ಭಾರೀ ಗಾಳಿ ಮಳೆ ಹಿನ್ನಲೆ ಅಧಿಕಾರಿಗಳಿಗೆ ಸರ್ವ ಸನ್ನದ್ಧ ಆಗಿರಲು ಸೂಚನೆ ನೀಡಲಾಗಿದೆ.
5 ದಿನಗಳ ಕಾಲ ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿರುವ ಕಾರಣ ಅಪಾಯದಲ್ಲಿರುವ ಗುಡ್ಡ ಭಾಗದ ನಿವಾಸಿಗಳನ್ನು ಸ್ಥಳಾಂತರ ಮಾಡುವಂತೆ ಆದೇಶಿಸಲಾಗಿದೆ. ಈಗಾಗಲೇ ಸಮುದ್ರಕ್ಕೆ ತೆರಳಿರುವ ಮೀನುಗಾರಿಕಾ ಬೋಟ್ಗಳು ತಕ್ಷಣ ದಡಕ್ಕೆ ಬಂದು ನವಮಂಗಳೂರು ಬಂದರಿನಲ್ಲಿ ಲಂಗರು ಹಾಕಲು ಅನುಮತಿ ನೀಡಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…