ಮಂಗಳೂರು: ಇಂದು ಬೆಳಿಗ್ಗೆ ಸುರಿದ ಭಾರೀ ಮಳೆಗೆ ಮಂಗಳೂರಿನ ಟೇಬಲ್ ಟಾಪ್ ವಿಮಾನ ನಿಲ್ದಾಣದ ರನ್ ವೇ ತಡೆಗೋಡೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರನ್ ವೇ ಸುರಕ್ಷತೆಯ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸೂಕ್ತ ರೀತಿಯ ಕ್ರಮ ಕೈಗೊಂಡು ಉತ್ತಮ ತಡೆಗೋಡೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣ ಟೇಬಲ್ ಟಾಪ್ ವಿಮಾನ ನಿಲ್ದಾಣವಾಗಿದ್ದು, ಲ್ಯಾಂಡಿಂಗ್ ಮತ್ತು ಟೇಕಾಫ್ ವೇಳೆ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. 2010 ರಲ್ಲಿ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆ ರನ್ ವೇ ಬಿಟ್ಟು ಮುಂದೆ ಲ್ಯಾಂಡ್ ಆದ ಪರಿಣಾಮ ಪ್ರಪಾತಕ್ಕೆ ಬಿದ್ದು 158 ಪ್ರಯಾಣಿಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸುತ್ತಲೂ ಭದ್ರವಾದ ತಡೆಗೋಡೆಗಳನ್ನು ನಿರ್ಮಾಣ ಮಾಡಿತ್ತು. ಇಂದು ಸುರಿದ ಭಾರೀ ಮಳೆಗೆ ಭೂ ಕುಸಿತದಿಂದ ರನ್ ವೇ ಸಮೀಪದ ತಡೆಗೋಡೆ ಕುಸಿದು ಬಿದ್ದಿದೆ.
ಏನಿದು ಟೇಬಲ್ ಟಾಪ್ ವಿಮಾನ ನಿಲ್ದಾಣ?
ಸುತ್ತಲೂ ಆಳ ಕಣಿವೆಯಿಂದ ಕೂಡಿ, ಬೆಟ್ಟದ ತುದಿಯಲ್ಲಿ ರನ್ ವೇ ಇರುವ ನಿಲ್ದಾಣಗಳನ್ನು ಟೇಬಲ್ ಟಾಪ್ ವಿಮಾನ ನಿಲ್ದಾಣ ಎಂದು ಗುರುತಿಸಲಾಗಿದೆ. ಮಂಗಳೂರು ಹೊರತು ಪಡಿಸಿ ದೇಶದಲ್ಲಿ ಕೋಝಿಕ್ಕೋಡು ಮತ್ತು ಲೆಂಗ್ಪುಯಿನಲ್ಲಿ ಈ ರೀತಿಯ ವಿಮಾನ ನಿಲ್ದಾಣಗಳನ್ನು ಕಾಣಬಹುದು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…