ಮಂಗಳೂರು: ಇಂದು ಬೆಳಿಗ್ಗೆ ಸುರಿದ ಭಾರೀ ಮಳೆಗೆ ಮಂಗಳೂರಿನ ಟೇಬಲ್ ಟಾಪ್ ವಿಮಾನ ನಿಲ್ದಾಣದ ರನ್ ವೇ ತಡೆಗೋಡೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರನ್ ವೇ ಸುರಕ್ಷತೆಯ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸೂಕ್ತ ರೀತಿಯ ಕ್ರಮ ಕೈಗೊಂಡು ಉತ್ತಮ ತಡೆಗೋಡೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣ ಟೇಬಲ್ ಟಾಪ್ ವಿಮಾನ ನಿಲ್ದಾಣವಾಗಿದ್ದು, ಲ್ಯಾಂಡಿಂಗ್ ಮತ್ತು ಟೇಕಾಫ್ ವೇಳೆ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. 2010 ರಲ್ಲಿ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆ ರನ್ ವೇ ಬಿಟ್ಟು ಮುಂದೆ ಲ್ಯಾಂಡ್ ಆದ ಪರಿಣಾಮ ಪ್ರಪಾತಕ್ಕೆ ಬಿದ್ದು 158 ಪ್ರಯಾಣಿಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸುತ್ತಲೂ ಭದ್ರವಾದ ತಡೆಗೋಡೆಗಳನ್ನು ನಿರ್ಮಾಣ ಮಾಡಿತ್ತು. ಇಂದು ಸುರಿದ ಭಾರೀ ಮಳೆಗೆ ಭೂ ಕುಸಿತದಿಂದ ರನ್ ವೇ ಸಮೀಪದ ತಡೆಗೋಡೆ ಕುಸಿದು ಬಿದ್ದಿದೆ.
ಏನಿದು ಟೇಬಲ್ ಟಾಪ್ ವಿಮಾನ ನಿಲ್ದಾಣ?
ಸುತ್ತಲೂ ಆಳ ಕಣಿವೆಯಿಂದ ಕೂಡಿ, ಬೆಟ್ಟದ ತುದಿಯಲ್ಲಿ ರನ್ ವೇ ಇರುವ ನಿಲ್ದಾಣಗಳನ್ನು ಟೇಬಲ್ ಟಾಪ್ ವಿಮಾನ ನಿಲ್ದಾಣ ಎಂದು ಗುರುತಿಸಲಾಗಿದೆ. ಮಂಗಳೂರು ಹೊರತು ಪಡಿಸಿ ದೇಶದಲ್ಲಿ ಕೋಝಿಕ್ಕೋಡು ಮತ್ತು ಲೆಂಗ್ಪುಯಿನಲ್ಲಿ ಈ ರೀತಿಯ ವಿಮಾನ ನಿಲ್ದಾಣಗಳನ್ನು ಕಾಣಬಹುದು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…