Featured

ಭಾರೀ ಮಳೆಯಿಂದಾಗಿ ಗಗನಕ್ಕೇರಿದ ಟೊಮ್ಯಾಟೊ ಬೆಲೆ ; ಕೆಜಿಗೆ 140 ರೂಪಾಯಿ  – Vishwanews24

ಗಗನಕ್ಕೇರಿದ ಟೊಮ್ಯಾಟೊ ಬೆಲೆ ; ಕೆಜಿಗೆ 140 ರೂಪಾಯಿ  – Vishwanews24

ಕೋಲಾರ: ವರ್ಷಧಾರೆಯ ನಡುವೆ ಕೋಲಾರ ಎಪಿಎಂಸಿಯಲ್ಲಿ ಟೊಮ್ಯಾಟೊ ಆವಕ ತೀವ್ರ ಕುಸಿತ ಕಂಡಿದ್ದು, ಪರಿಣಾಮ ಟೊಮ್ಯಾಟೊ ದರ ಗಗನಕ್ಕೇರಿದೆ.

ಒಂದು ತಿಂಗಳಿಂದ ತೇವಾಂಶ ಹೆಚ್ಚಾಗಿ ಟೊಮ್ಯಾಟೊ ಇನ್ನಿತರ ತರಕಾರಿಗಳಿಗೆ ರೋಗಬಾಧೆ ಹೆಚ್ಚಾಗಿ ಬೆಳೆ ನಷ್ಟವಾಗಿದೆ.

ಇಳುವರಿಯಕಲ್ಲೂ ತೀವ್ರ ಕುಸಿತ ಕಂಡುಬಂದಿದೆ. ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಬೆಳೆ ಹಾನಿಗೀಡಾಗಿದೆ. ಜಿಟಿಜಿಟಿ ಮಳೆಗೆ ಇಳುವರಿ ಕಟಾವು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೋಲಾರ ಎಪಿಎಂಸಿಗೆ ತರಕಾರಿಗಳ ಆವಕ ತೀರಾ ಕಡಿಮೆ ಆಗಿದೆ.

ಶುಕ್ರವಾರ ಕೋಲಾರದಲ್ಲಿ ಗುಣಮಟ್ಟದ ಟೊಮ್ಯಾಟೊ 15 ಕೆಜಿ ಬಾಕ್ಸ್​ ಒಂದರ ಬೆಲೆ 1500 ರೂಪಾಯಿ ದಾಟಿದ್ದರೆ ಕೇವಲ ಒಂದೇ ಒಂದು ಲಾಟ್​ ಪ್ರತಿ ಬಾಕ್ಸ್​ಗೆ 2000 ರೂಪಾಯಿಗೆ ಹರಾಜಾಗಿ ದಾಖಲೆ ಬರೆದಿದೆ. ಇನ್ನು ಚಿಲ್ಲರೆ ಅಂಗಡಿಗಳಲ್ಲಿ ಟೊಮ್ಯಾಟೊ ಬೆಲೆ ಕೆಜಿಗೆ 140 ರೂಪಾಯಿ ದಾಟಿದೆ.

10,000-12,000 ಕ್ವಿಂಟಾಲ್​ ಟೊಮ್ಯಾಟೊ ಆವಕವಾಗುತ್ತಿದ್ದ ಮಾರುಕಟ್ಟೆಯಲ್ಲಿ ಶುಕ್ರವಾರ ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ಅಂದರೆ 4664 ಕ್ವಿಂಟಾಲ್​ನಷ್ಟು ಆವಕವಾಗಿತ್ತು. ಗುಣಮಟ್ಟದ ಟೊಮ್ಯಾಟೊ ಬಾಕ್ಸ್​ 1,500 ರೂಪಾಯಿಗೆ ಮೇಲ್ಪಟ್ಟು ಹರಾಜಾದರೆ, ಕೆಆರ್​ಎಸ್​ ಮಂಡಿಯಲ್ಲಿ 20 ಬಾಕ್ಸ್​ ಇದ್ದ ಒಂದು ಲಾಟ್​ 2000 ರೂ.ಗೆ ಹರಾಜು ಕಂಡಿದೆ.

ಕೆಲವು ಮಂಡಿಗಳಲ್ಲಿ ಮಾಲೀಕರು ಸ್ಪರ್ಧೆಯ ಮೇಲೆ ಹರಾಜು ಕೂಗುವುದರಿಂದ ಒಂದು ಲಾಟ್​ ದಾಖಲೆ ಬೆಲೆಗೆ ಹರಾಜಾಗಿದೆ. ಆವಕ ಕಡಿಮೆ ಇದ್ದುದರಿಂದ ಸರಾಸರಿ 1500 ರೂ.ಗೆ ಹರಾಜು ಕಾಣುತ್ತಿದೆ ಎಂದು ಎಪಿಎಂಸಿ ಕಾರ್ಯದರ್ಶಿ ಟಿ.ಎಸ್​.ರವಿಕುಮಾರ್​ ತಿಳಿಸಿದ್ದಾರೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

14 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

19 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

22 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

22 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

22 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

22 hours ago