ಕೋಲಾರ: ವರ್ಷಧಾರೆಯ ನಡುವೆ ಕೋಲಾರ ಎಪಿಎಂಸಿಯಲ್ಲಿ ಟೊಮ್ಯಾಟೊ ಆವಕ ತೀವ್ರ ಕುಸಿತ ಕಂಡಿದ್ದು, ಪರಿಣಾಮ ಟೊಮ್ಯಾಟೊ ದರ ಗಗನಕ್ಕೇರಿದೆ.
ಒಂದು ತಿಂಗಳಿಂದ ತೇವಾಂಶ ಹೆಚ್ಚಾಗಿ ಟೊಮ್ಯಾಟೊ ಇನ್ನಿತರ ತರಕಾರಿಗಳಿಗೆ ರೋಗಬಾಧೆ ಹೆಚ್ಚಾಗಿ ಬೆಳೆ ನಷ್ಟವಾಗಿದೆ.
ಇಳುವರಿಯಕಲ್ಲೂ ತೀವ್ರ ಕುಸಿತ ಕಂಡುಬಂದಿದೆ. ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಬೆಳೆ ಹಾನಿಗೀಡಾಗಿದೆ. ಜಿಟಿಜಿಟಿ ಮಳೆಗೆ ಇಳುವರಿ ಕಟಾವು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೋಲಾರ ಎಪಿಎಂಸಿಗೆ ತರಕಾರಿಗಳ ಆವಕ ತೀರಾ ಕಡಿಮೆ ಆಗಿದೆ.
ಶುಕ್ರವಾರ ಕೋಲಾರದಲ್ಲಿ ಗುಣಮಟ್ಟದ ಟೊಮ್ಯಾಟೊ 15 ಕೆಜಿ ಬಾಕ್ಸ್ ಒಂದರ ಬೆಲೆ 1500 ರೂಪಾಯಿ ದಾಟಿದ್ದರೆ ಕೇವಲ ಒಂದೇ ಒಂದು ಲಾಟ್ ಪ್ರತಿ ಬಾಕ್ಸ್ಗೆ 2000 ರೂಪಾಯಿಗೆ ಹರಾಜಾಗಿ ದಾಖಲೆ ಬರೆದಿದೆ. ಇನ್ನು ಚಿಲ್ಲರೆ ಅಂಗಡಿಗಳಲ್ಲಿ ಟೊಮ್ಯಾಟೊ ಬೆಲೆ ಕೆಜಿಗೆ 140 ರೂಪಾಯಿ ದಾಟಿದೆ.
10,000-12,000 ಕ್ವಿಂಟಾಲ್ ಟೊಮ್ಯಾಟೊ ಆವಕವಾಗುತ್ತಿದ್ದ ಮಾರುಕಟ್ಟೆಯಲ್ಲಿ ಶುಕ್ರವಾರ ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ಅಂದರೆ 4664 ಕ್ವಿಂಟಾಲ್ನಷ್ಟು ಆವಕವಾಗಿತ್ತು. ಗುಣಮಟ್ಟದ ಟೊಮ್ಯಾಟೊ ಬಾಕ್ಸ್ 1,500 ರೂಪಾಯಿಗೆ ಮೇಲ್ಪಟ್ಟು ಹರಾಜಾದರೆ, ಕೆಆರ್ಎಸ್ ಮಂಡಿಯಲ್ಲಿ 20 ಬಾಕ್ಸ್ ಇದ್ದ ಒಂದು ಲಾಟ್ 2000 ರೂ.ಗೆ ಹರಾಜು ಕಂಡಿದೆ.
ಕೆಲವು ಮಂಡಿಗಳಲ್ಲಿ ಮಾಲೀಕರು ಸ್ಪರ್ಧೆಯ ಮೇಲೆ ಹರಾಜು ಕೂಗುವುದರಿಂದ ಒಂದು ಲಾಟ್ ದಾಖಲೆ ಬೆಲೆಗೆ ಹರಾಜಾಗಿದೆ. ಆವಕ ಕಡಿಮೆ ಇದ್ದುದರಿಂದ ಸರಾಸರಿ 1500 ರೂ.ಗೆ ಹರಾಜು ಕಾಣುತ್ತಿದೆ ಎಂದು ಎಪಿಎಂಸಿ ಕಾರ್ಯದರ್ಶಿ ಟಿ.ಎಸ್.ರವಿಕುಮಾರ್ ತಿಳಿಸಿದ್ದಾರೆ.
ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್. ಅಶೋಕ್ ಬೆಂಗಳೂರು: ನಿರ್ಗಮಿತ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ –…
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…