ಕೋಲಾರ: ವರ್ಷಧಾರೆಯ ನಡುವೆ ಕೋಲಾರ ಎಪಿಎಂಸಿಯಲ್ಲಿ ಟೊಮ್ಯಾಟೊ ಆವಕ ತೀವ್ರ ಕುಸಿತ ಕಂಡಿದ್ದು, ಪರಿಣಾಮ ಟೊಮ್ಯಾಟೊ ದರ ಗಗನಕ್ಕೇರಿದೆ.
ಒಂದು ತಿಂಗಳಿಂದ ತೇವಾಂಶ ಹೆಚ್ಚಾಗಿ ಟೊಮ್ಯಾಟೊ ಇನ್ನಿತರ ತರಕಾರಿಗಳಿಗೆ ರೋಗಬಾಧೆ ಹೆಚ್ಚಾಗಿ ಬೆಳೆ ನಷ್ಟವಾಗಿದೆ.
ಇಳುವರಿಯಕಲ್ಲೂ ತೀವ್ರ ಕುಸಿತ ಕಂಡುಬಂದಿದೆ. ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಬೆಳೆ ಹಾನಿಗೀಡಾಗಿದೆ. ಜಿಟಿಜಿಟಿ ಮಳೆಗೆ ಇಳುವರಿ ಕಟಾವು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೋಲಾರ ಎಪಿಎಂಸಿಗೆ ತರಕಾರಿಗಳ ಆವಕ ತೀರಾ ಕಡಿಮೆ ಆಗಿದೆ.
ಶುಕ್ರವಾರ ಕೋಲಾರದಲ್ಲಿ ಗುಣಮಟ್ಟದ ಟೊಮ್ಯಾಟೊ 15 ಕೆಜಿ ಬಾಕ್ಸ್ ಒಂದರ ಬೆಲೆ 1500 ರೂಪಾಯಿ ದಾಟಿದ್ದರೆ ಕೇವಲ ಒಂದೇ ಒಂದು ಲಾಟ್ ಪ್ರತಿ ಬಾಕ್ಸ್ಗೆ 2000 ರೂಪಾಯಿಗೆ ಹರಾಜಾಗಿ ದಾಖಲೆ ಬರೆದಿದೆ. ಇನ್ನು ಚಿಲ್ಲರೆ ಅಂಗಡಿಗಳಲ್ಲಿ ಟೊಮ್ಯಾಟೊ ಬೆಲೆ ಕೆಜಿಗೆ 140 ರೂಪಾಯಿ ದಾಟಿದೆ.
10,000-12,000 ಕ್ವಿಂಟಾಲ್ ಟೊಮ್ಯಾಟೊ ಆವಕವಾಗುತ್ತಿದ್ದ ಮಾರುಕಟ್ಟೆಯಲ್ಲಿ ಶುಕ್ರವಾರ ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ಅಂದರೆ 4664 ಕ್ವಿಂಟಾಲ್ನಷ್ಟು ಆವಕವಾಗಿತ್ತು. ಗುಣಮಟ್ಟದ ಟೊಮ್ಯಾಟೊ ಬಾಕ್ಸ್ 1,500 ರೂಪಾಯಿಗೆ ಮೇಲ್ಪಟ್ಟು ಹರಾಜಾದರೆ, ಕೆಆರ್ಎಸ್ ಮಂಡಿಯಲ್ಲಿ 20 ಬಾಕ್ಸ್ ಇದ್ದ ಒಂದು ಲಾಟ್ 2000 ರೂ.ಗೆ ಹರಾಜು ಕಂಡಿದೆ.
ಕೆಲವು ಮಂಡಿಗಳಲ್ಲಿ ಮಾಲೀಕರು ಸ್ಪರ್ಧೆಯ ಮೇಲೆ ಹರಾಜು ಕೂಗುವುದರಿಂದ ಒಂದು ಲಾಟ್ ದಾಖಲೆ ಬೆಲೆಗೆ ಹರಾಜಾಗಿದೆ. ಆವಕ ಕಡಿಮೆ ಇದ್ದುದರಿಂದ ಸರಾಸರಿ 1500 ರೂ.ಗೆ ಹರಾಜು ಕಾಣುತ್ತಿದೆ ಎಂದು ಎಪಿಎಂಸಿ ಕಾರ್ಯದರ್ಶಿ ಟಿ.ಎಸ್.ರವಿಕುಮಾರ್ ತಿಳಿಸಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…