ಮಂಗಳೂರು : ಎಲ್ಲೆಲ್ಲೂ ವರುಣನ ಆರ್ಭಟ ಹೆಚ್ಚಾಗಿದೆ. ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ ಆರಂಭವಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಸೋಮವಾರ ರಾತ್ರಿಯಿಂದ ಚಾರ್ಮಾಡಿ ಘಾಟ್ನಲ್ಲಿ ಪ್ರಯಾಣಿಕರು ಸಿಲುಕಿಕೊಂಡು ನೀರು, ತಿಂಡಿ ಸಿಗದೇ ಪರದಾಡುವಂತ ಸ್ಥಿತಿ ಉಂಟಾಗಿದೆ.
ಒಟ್ಟು 9 ಕಡೆ ಗುಡ್ಡ ಕುಸಿದಿದ್ದು, ಇನ್ನು ಕೆಲವೆಡೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಎರಡು ಕಡೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಣ್ಣು ತೆರವಿಗೆ ಜೆಸಿಬಿ, ಹಿಟಾಚಿಗಳನ್ನು ಸ್ಥಳಕ್ಕೆ ತರಲಾಗಿದ್ದು, ತೆರವು ಕಾರ್ಯಾಚರಣೆ ಮುಂದುವರಿದಿದೆ.
ಮಳೆಯಿಂದಾಗಿ ಮಣ್ಣು ತೆರವು ಕಾರ್ಯ ವಿಳಂಬವಾಗುತ್ತಿದೆ. ಆದರೂ ಮಣ್ಣು ತೆರವು ಮಾಡಲು ನಿರಂತರ ಕೆಲಸ ಮಾಡಲಾಗುತ್ತಿದೆ. ಮಣ್ಣು ಕುಸಿತದಿಂದ ಹಾಸನ ಮಾರ್ಗದ ರೈಲು ಸಂಚಾರ ಸೋಮವಾರದಿಂದ ಸ್ಥಗಿತಗೊಂಡಿತ್ತು, ಈಗ ರಸ್ತೆ ಸಂಚಾರವೂ ಸ್ಥಗಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಡ್ಡ ಕುಸಿತದಿಂದ ವಾಹನಗಳು ಸರದಿಯಲ್ಲಿ ನಿಂತಿದ್ದು, ಜನರಿಗೆ ಆಹಾರದ ವ್ಯವಸ್ಥೆ ಮಾಡಲಾಗಿತ್ತು, ಆದರೆ ಜನರ ಸಂಖ್ಯೆ ಹೆಚ್ಚಾಗಿದ್ದರಿಂದ ಎಲ್ಲರಿಗೂ ತಿಂಡಿ, ನೀರು ಒದಗಿಸುವುದು ಕಷ್ಟಕರವಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…