ಮಂಗಳೂರು : ಎಲ್ಲೆಲ್ಲೂ ವರುಣನ ಆರ್ಭಟ ಹೆಚ್ಚಾಗಿದೆ. ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ ಆರಂಭವಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಸೋಮವಾರ ರಾತ್ರಿಯಿಂದ ಚಾರ್ಮಾಡಿ ಘಾಟ್ನಲ್ಲಿ ಪ್ರಯಾಣಿಕರು ಸಿಲುಕಿಕೊಂಡು ನೀರು, ತಿಂಡಿ ಸಿಗದೇ ಪರದಾಡುವಂತ ಸ್ಥಿತಿ ಉಂಟಾಗಿದೆ.
ಒಟ್ಟು 9 ಕಡೆ ಗುಡ್ಡ ಕುಸಿದಿದ್ದು, ಇನ್ನು ಕೆಲವೆಡೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಎರಡು ಕಡೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಣ್ಣು ತೆರವಿಗೆ ಜೆಸಿಬಿ, ಹಿಟಾಚಿಗಳನ್ನು ಸ್ಥಳಕ್ಕೆ ತರಲಾಗಿದ್ದು, ತೆರವು ಕಾರ್ಯಾಚರಣೆ ಮುಂದುವರಿದಿದೆ.
ಮಳೆಯಿಂದಾಗಿ ಮಣ್ಣು ತೆರವು ಕಾರ್ಯ ವಿಳಂಬವಾಗುತ್ತಿದೆ. ಆದರೂ ಮಣ್ಣು ತೆರವು ಮಾಡಲು ನಿರಂತರ ಕೆಲಸ ಮಾಡಲಾಗುತ್ತಿದೆ. ಮಣ್ಣು ಕುಸಿತದಿಂದ ಹಾಸನ ಮಾರ್ಗದ ರೈಲು ಸಂಚಾರ ಸೋಮವಾರದಿಂದ ಸ್ಥಗಿತಗೊಂಡಿತ್ತು, ಈಗ ರಸ್ತೆ ಸಂಚಾರವೂ ಸ್ಥಗಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಡ್ಡ ಕುಸಿತದಿಂದ ವಾಹನಗಳು ಸರದಿಯಲ್ಲಿ ನಿಂತಿದ್ದು, ಜನರಿಗೆ ಆಹಾರದ ವ್ಯವಸ್ಥೆ ಮಾಡಲಾಗಿತ್ತು, ಆದರೆ ಜನರ ಸಂಖ್ಯೆ ಹೆಚ್ಚಾಗಿದ್ದರಿಂದ ಎಲ್ಲರಿಗೂ ತಿಂಡಿ, ನೀರು ಒದಗಿಸುವುದು ಕಷ್ಟಕರವಾಗಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…