Featured

ಭಾರೀ ಮಳೆಯಿಂದ ತತ್ತರಿಸಿದ ತಮಿಳುನಾಡು ; ರೆಡ್ ಅಲರ್ಟ್ ಫೋಷಣೆ – Vishwanews24

ಭಾರೀ ಮಳೆಯಿಂದ ತತ್ತರಿಸಿದ ತಮಿಳುನಾಡು ; ರೆಡ್ ಅಲರ್ಟ್ ಫೋಷಣೆ – Vishwanews24

ಚೆನ್ನೈ: ಭಾರೀ ಮಳೆಯಿಂದ ತತ್ತರಿಸಿ ಹೋಗಿರುವ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಮತ್ತೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಫೋಷಣೆ ಮಾಡಿದೆ.

ಬುಧವಾರ ಮತ್ತು ಗುರುವಾರದಂದು ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕಡಿಮೆ ಒತ್ತಡ ಕರಾವಳಿಯನ್ನು ತಲುಪುತ್ತಿದ್ದು, ಗುರುವಾರ ರಾತ್ರಿಯವರೆಗೂ ಚೆನ್ನೈ ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟ ಮಾಡಿದ ಪೊಲೀಸ್ – ವೀಡಿಯೋ ವೈರಲ್ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮಳೆಯಾಗಬಹುದು. ಬುಧವಾರ ಮತ್ತು ಗುರುವಾರ 20 ಮಿ.ಮೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಎರಡು ದಿನಗಳ ಕಾಲ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್‍ಗೆ ತಲುಪಬಹುದು ಎಂದು ಇಲಾಖೆ ವರದಿ ಮಾಡಿದೆ.

ಭಾರೀ ಮಳೆಯಿಂದ ಜಲಾವೃತಗೊಂಡಿದ್ದ ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಪ್ರವಾಹದ ನಂತರ, ಹಲವಾರು ಜನರು ಪರಿಹಾರ ಶಿಬಿರಗಳಲ್ಲಿ ಉಳಿದುಕೊಂಡಿದ್ದಾರೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ ಆ ಜನರನ್ನು ಮನೆಗಳಿಗೆ ಸ್ಥಳಾಂತರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸುಮಾರು 848 ಜನರು ಇನ್ನೂ ಪರಿಹಾರ ಶಿಬಿರಗಳಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರ ಕೂಡ ಚೆನ್ನೈನ ಒಂಬತ್ತು ಸ್ಥಳಗಳಲ್ಲಿ 16 ಬೀದಿಗಳು ನೀರಿನಿಂದ ಜಲಾವೃತವಾಗಿದ್ದು, ನೀರನ್ನು ಪಂಪ್ ಮಾಡಿ ಹೊರತೆಗೆಯಲಾಗುತ್ತಿದೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್‍ನ ಹಿರಿಯ ಅಧಿಕಾರಿಗಳು, ನೀರನ್ನು ಹೊರ ತೆಗೆಯಲು 426 ಪಂಪ್‍ಗಳನ್ನು ಬಳಸಲಾಗಿದೆ. ರಂಗರಾಜಪುರಂ ಸುರಂಗಮಾರ್ಗವು ಜಲಾವೃತಗೊಂಡು ಮುಚ್ಚಲ್ಪಟ್ಟಿತು. ಅದಕ್ಕೆ ನೀರನ್ನು ಹೊರ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು ಎಂದು ತಿಳಿಸಿದರು.

 

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

17 minutes ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

26 minutes ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

34 minutes ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

49 minutes ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

4 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

4 hours ago