ಚೆನ್ನೈ: ಭಾರೀ ಮಳೆಯಿಂದ ತತ್ತರಿಸಿ ಹೋಗಿರುವ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಮತ್ತೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಫೋಷಣೆ ಮಾಡಿದೆ.
ಬುಧವಾರ ಮತ್ತು ಗುರುವಾರದಂದು ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕಡಿಮೆ ಒತ್ತಡ ಕರಾವಳಿಯನ್ನು ತಲುಪುತ್ತಿದ್ದು, ಗುರುವಾರ ರಾತ್ರಿಯವರೆಗೂ ಚೆನ್ನೈ ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟ ಮಾಡಿದ ಪೊಲೀಸ್ – ವೀಡಿಯೋ ವೈರಲ್ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮಳೆಯಾಗಬಹುದು. ಬುಧವಾರ ಮತ್ತು ಗುರುವಾರ 20 ಮಿ.ಮೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಎರಡು ದಿನಗಳ ಕಾಲ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ಗೆ ತಲುಪಬಹುದು ಎಂದು ಇಲಾಖೆ ವರದಿ ಮಾಡಿದೆ.
ಭಾರೀ ಮಳೆಯಿಂದ ಜಲಾವೃತಗೊಂಡಿದ್ದ ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಪ್ರವಾಹದ ನಂತರ, ಹಲವಾರು ಜನರು ಪರಿಹಾರ ಶಿಬಿರಗಳಲ್ಲಿ ಉಳಿದುಕೊಂಡಿದ್ದಾರೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ ಆ ಜನರನ್ನು ಮನೆಗಳಿಗೆ ಸ್ಥಳಾಂತರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸುಮಾರು 848 ಜನರು ಇನ್ನೂ ಪರಿಹಾರ ಶಿಬಿರಗಳಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ಕೂಡ ಚೆನ್ನೈನ ಒಂಬತ್ತು ಸ್ಥಳಗಳಲ್ಲಿ 16 ಬೀದಿಗಳು ನೀರಿನಿಂದ ಜಲಾವೃತವಾಗಿದ್ದು, ನೀರನ್ನು ಪಂಪ್ ಮಾಡಿ ಹೊರತೆಗೆಯಲಾಗುತ್ತಿದೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ನ ಹಿರಿಯ ಅಧಿಕಾರಿಗಳು, ನೀರನ್ನು ಹೊರ ತೆಗೆಯಲು 426 ಪಂಪ್ಗಳನ್ನು ಬಳಸಲಾಗಿದೆ. ರಂಗರಾಜಪುರಂ ಸುರಂಗಮಾರ್ಗವು ಜಲಾವೃತಗೊಂಡು ಮುಚ್ಚಲ್ಪಟ್ಟಿತು. ಅದಕ್ಕೆ ನೀರನ್ನು ಹೊರ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು ಎಂದು ತಿಳಿಸಿದರು.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…