ಮಂಗಳೂರು : ವಿಪರೀತ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ರಜೆ ಯನ್ನು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಿರುವ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿದ ಹಿನ್ನಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ಮಕ್ಕಳು ತಗ್ಗು ಪ್ರದೇಶಗಳು, ಕೆರೆಗಳು, ಸಮುದ್ರ ತೀರ ಮತ್ತು ನದಿ ದಡಗಳಿಗೆ ಹೋಗದಂತೆ ನೋಡಿಕೊಳ್ಳಲು ಪೋಷಕರಿಗೆ ಸೂಚಿಸಲಾಗಿದೆ. ಮೀನುಗಾರರಿಗೂ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಇರುವಂತೆ ಸೂಚಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಲು ಮತ್ತು ಜಾಗರೂಕರಾಗಿರಲು ಸೂಚಿಸಲಾಗಿದೆ.
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…
ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ ಬೆಂಗಳೂರು: ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ತರಲು ಸರ್ಕಾರ…
ರೂರಲ್ ಎಜುಕೇಶನ್ ಸೊಸೈಟಿ (ರಿ) ಪಟ್ಲ ಅಧ್ಯಕ್ಷರಾಗಿ ಪೆರ್ಣಂಕಿಲ ಶ್ರೀಶ ನಾಯಕ್ ರೂರಲ್ ಎಜುಕೇಶನ್ ಸೊಸೈಟಿ, ಪಟ್ಲ ಇದರ ವಾರ್ಷಿಕ…
ಉಜ್ವಲ ಯೋಜನೆಯ ಫಲಾನುಭವಿಗಳ ವಾರ್ಷಿಕ ಸಿಲಿಂಡರ್ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ…