ಪತ್ತನಂತಿಟ್ಟ, : ಭಾರೀ ಮಳೆ ಮತ್ತು ಪಂಬಾ ಸೇರಿದಂತೆ ಪ್ರಮುಖ ನದಿಗಳಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟದಿಂದ ಕೇರಳದ ಪತ್ತನಂತಿಟ್ಟದಲ್ಲಿರುವ ಶಬರಿಮಲೆಯ ಅಯ್ಯಪ್ಪ ದೇಗುಲದ ಯಾತ್ರೆಯನ್ನು ಶನಿವಾರ ಸ್ಥಗಿತಗೊಳಿಸಲಾಗಿದೆ.
ಪತ್ತನಂತಿಟ್ಟ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ಪಂಭಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಕ್ಕಿ-ಆನಾತೋಡ್ ಜಲಾಶಯ (ಗೇಟ್ಗಳು ತೆರೆದು) ಮತ್ತು ಪಂಬಾ ಅಣೆಕಟ್ಟುಗಳ ತೀರಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಪಂಬಾ ಮತ್ತು ಶಬರಿಮಲೆಗೆ ಯಾತ್ರೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಾ ಎಸ್ ಅಯ್ಯರ್ ಶುಕ್ರವಾರ ಆದೇಶದಲ್ಲಿ ತಿಳಿಸಿದ್ದಾರೆ.
ವರ್ಚುವಲ್ ಕ್ಯೂ ಸಿಸ್ಟಮ್ ಮೂಲಕ ಅಯ್ಯಪ್ಪನ ದರ್ಶನಕ್ಕೆ ಮುಂಚಿತವಾಗಿ ಕಾಯ್ದಿರಿಸಿದ ಯಾತ್ರಾರ್ಥಿಗಳಿಗೆ ಹವಾಮಾನ ಅನುಕೂಲಕರವಾದ ಬಳಿಕ “ದರ್ಶನ” (ವೀಕ್ಷಣೆ) ಕ್ಕೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಾ ಎಸ್ ಅಯ್ಯರ್ ತಿಳಿಸಿದ್ದಾರೆ.
ಕೇರಳದಲ್ಲಿ ವಿಪರೀತ ಮಳೆಯಿದ್ದರೂ ನೂರಾರು ಭಕ್ತರು ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಶಬರಿಮಲೆ ಬೆಟ್ಟವನ್ನು ಹತ್ತಿ ಚಾರಣ ಮಾಡುತ್ತಿದ್ದಾರೆ. ಎರಡು ತಿಂಗಳ ಕಾಲ ವಾರ್ಷಿಕ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗಾಗಿ ನವೆಂಬರ್ 16ರಂದು ಶಬರಿಮಲೆ ದೇಗುಲದ ಬಾಗಿಲನ್ನು ತೆರೆಯಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…