ಪತ್ತನಂತಿಟ್ಟ, : ಭಾರೀ ಮಳೆ ಮತ್ತು ಪಂಬಾ ಸೇರಿದಂತೆ ಪ್ರಮುಖ ನದಿಗಳಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟದಿಂದ ಕೇರಳದ ಪತ್ತನಂತಿಟ್ಟದಲ್ಲಿರುವ ಶಬರಿಮಲೆಯ ಅಯ್ಯಪ್ಪ ದೇಗುಲದ ಯಾತ್ರೆಯನ್ನು ಶನಿವಾರ ಸ್ಥಗಿತಗೊಳಿಸಲಾಗಿದೆ.
ಪತ್ತನಂತಿಟ್ಟ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ಪಂಭಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಕ್ಕಿ-ಆನಾತೋಡ್ ಜಲಾಶಯ (ಗೇಟ್ಗಳು ತೆರೆದು) ಮತ್ತು ಪಂಬಾ ಅಣೆಕಟ್ಟುಗಳ ತೀರಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಪಂಬಾ ಮತ್ತು ಶಬರಿಮಲೆಗೆ ಯಾತ್ರೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಾ ಎಸ್ ಅಯ್ಯರ್ ಶುಕ್ರವಾರ ಆದೇಶದಲ್ಲಿ ತಿಳಿಸಿದ್ದಾರೆ.
ವರ್ಚುವಲ್ ಕ್ಯೂ ಸಿಸ್ಟಮ್ ಮೂಲಕ ಅಯ್ಯಪ್ಪನ ದರ್ಶನಕ್ಕೆ ಮುಂಚಿತವಾಗಿ ಕಾಯ್ದಿರಿಸಿದ ಯಾತ್ರಾರ್ಥಿಗಳಿಗೆ ಹವಾಮಾನ ಅನುಕೂಲಕರವಾದ ಬಳಿಕ “ದರ್ಶನ” (ವೀಕ್ಷಣೆ) ಕ್ಕೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಾ ಎಸ್ ಅಯ್ಯರ್ ತಿಳಿಸಿದ್ದಾರೆ.
ಕೇರಳದಲ್ಲಿ ವಿಪರೀತ ಮಳೆಯಿದ್ದರೂ ನೂರಾರು ಭಕ್ತರು ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಶಬರಿಮಲೆ ಬೆಟ್ಟವನ್ನು ಹತ್ತಿ ಚಾರಣ ಮಾಡುತ್ತಿದ್ದಾರೆ. ಎರಡು ತಿಂಗಳ ಕಾಲ ವಾರ್ಷಿಕ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗಾಗಿ ನವೆಂಬರ್ 16ರಂದು ಶಬರಿಮಲೆ ದೇಗುಲದ ಬಾಗಿಲನ್ನು ತೆರೆಯಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…