Featured

ಭಾರೀ ಮಳೆ :  ಶಬರಿಮಲೆ ಯಾತ್ರೆಗೆ ಅಡ್ಡಿ ; ಭಕ್ತರು ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚನೆ – Vishwanews24

ಭಾರೀ ಮಳೆ :  ಶಬರಿಮಲೆ ಯಾತ್ರೆಗೆ ಅಡ್ಡಿ ; ಭಕ್ತರು ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚನೆ – Vishwanews24

ಪತ್ತನಂತಿಟ್ಟ : ಮಂಗಳವಾರದಿಂದ ಶಬರಿಮಲೆ ಪ್ರವೇಶಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿದ್ದು, ಮಳೆಯಿಂದಾಗಿ ಇಲ್ಲಿನ ಅಚನ್‌ಕೋವಿಲ್ ನದಿ ತುಂಬಿ ಹರಿಯುತ್ತಿದ್ದು, ಅನೇಕ ರಸ್ತೆಗಳು, ಸೇತುವೆಗಳು ಮುಳುಗಿ ಅವಘಡ ಸಂಭವಿಸಿರುವ ಕಾರಣ ಮತ್ತು ಮಳೆಗೆ ಮತ್ತಷ್ಟುಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆಯಿಂದ ಭಕ್ತರ ಇರುವಂತೆ ಸೂಚನೆ ನೀಡಲಾಗಿದೆ.

ಪತ್ತನಂತಿಟ್ಟ ಜಿಲ್ಲೆಯಲ್ಲಿ ಎಡಬಿಡದೆ ಭಾರೀ ಮಳೆಯಾಗುತ್ತಿದ್ದು, ಪ್ರಮುಖ ಹೆದ್ದಾರಿಗಳು ಸೇರಿದಂತೆ ರಸ್ತೆಗಳು ಟ್ರಾಫಿಕ್ ಜಾಮ್ ಆಗಿದ್ದು, ಪಂದಳಂ-ಪತ್ತನಂತಿಟ್ಟ-ಮಾವೆಲಿಕ್ಕರ ರಸ್ತೆ ಹಲವು ಕಡೆ ಜಲಾವೃತಗೊಂಡಿದ್ದು, ಶಬರಿಮಲೆ ಯಾತ್ರಿಕರು ಬಳಸುವ ಪ್ರಮುಖ ರಸ್ತೆಗಳಲ್ಲಿ ಇದೂ ಒಂದು. ಭಕ್ತರು ಪಂದಳಂ ವಲಿಯಕೊಯಿಕ್ಕಲ್ ಶಾಸ್ತಾ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಶಬರಿಮಲೆಗೆ ಭೇಟಿ ನೀಡುವುದು ಪದ್ಧತಿಯಾಗಿದೆ. ಆದರೆ ಮಳೆಯಿಂದಾಗಿ ಕಡಕ್ಕಾಡ್‌ನಲ್ಲಿ ಪಂದಳಂ-ಪತ್ತನಂತಿಟ್ಟ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಶಬರಿಮಲೆ ದೇವಸ್ಥಾನಕ್ಕೆ ಟ್ರೆಕ್ಕಿಂಗ್ ಸ್ವಾಮಿ ಅಯ್ಯಪ್ಪನ್ ರಸ್ತೆಯ ಮೂಲಕ ಮಾತ್ರ ಅನುಮತಿ ನೀಡಲಾಗಿದೆ. ಭಕ್ತರ ದರ್ಶನ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕೇರಳ ಸರ್ಕಾರ ಕೈಗೊಂಡಿದೆ.

ನೂರನಾಡ್, ಚಾರುಮ್ಮೂಡು ಮತ್ತು ಕಾಯಂಕುಲಂ ಪ್ರದೇಶಗಳ ಹಲವು ರಸ್ತೆಗಳು ಹಲವು ಕಡೆಗಳಲ್ಲಿ ಬ್ಲಾಕ್ ಆಗಿವೆ. ಅಚನ್‌ಕೋವಿಲ್‌ನ ಕರಾವಳಿ ಪ್ರದೇಶಗಳಾದ ಇರಾಮನ್, ಪ್ರಮದಮ್, ತುಂಪಮೊನ್, ಮುತ್ತಮ್ ಮತ್ತು ಕುಡಸ್ಸನಾಡ್‌ನ ಹಲವು ಗ್ರಾಮಗಳು ಸಹ ಜಲಾವೃತವಾಗಿವೆ. ಈ ಭಾಗದ ಸಣ್ಣ ರಸ್ತೆಗಳೂ ಜಲಾವೃತವಾಗಿವೆ.

ಪಂದಳಂನಿಂದ ಮಾವೇಲಿಕ್ಕಾರಕ್ಕೆ ಹೋಗುವ ಮಾರ್ಗದಲ್ಲಿ ಐರಾನಿಮುತ್ತಮ್ ಮತ್ತು ಮುದಿಯೂರ್ಕೋಣಂ ಪ್ರದೇಶಗಳಲ್ಲಿ ಪ್ರವಾಹದಿಂದಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ಅಡೂರಿನ ವೈದ್ಯಕೀಯ ಸೇವಾ ನಿಗಮದ ಗೋದಾಮಿಗೆ ನೀರು ನುಗ್ಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಗಳು ನಾಶವಾಗಿದೆ.

ಇನ್ನು ಶಬರಿಮಲೆ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ಭೂಕುಸಿತ ಹಾಗೂ ರಸ್ತೆ ತಡೆ ಆಗುವ ಸಾಧ್ಯತೆ ಇದ್ದು, ಅಡೆತಡೆಗಳನ್ನು ತೆಗೆದುಹಾಕಲು ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಸಿದ್ಧಪಡಿಸಲಾಗಿದೆ.

ಶಬರಿಮಲೆ ಯಾತ್ರೆಗಾಗಿ ಆನ್ ಲೈನ್ ಮೂಲಕ ಬುಕ್ ಮಾಡಿದವರ ಸಂಖ್ಯೆ ಮಂಗಳವಾರಕ್ಕೆ 8,000 ಆಗಿದ್ದು, ಭಕ್ತರ ಸಂಖ್ಯೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚಿಸಿದೆ.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

1 day ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

1 day ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

1 day ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago