ಪತ್ತನಂತಿಟ್ಟ : ಮಂಗಳವಾರದಿಂದ ಶಬರಿಮಲೆ ಪ್ರವೇಶಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿದ್ದು, ಮಳೆಯಿಂದಾಗಿ ಇಲ್ಲಿನ ಅಚನ್ಕೋವಿಲ್ ನದಿ ತುಂಬಿ ಹರಿಯುತ್ತಿದ್ದು, ಅನೇಕ ರಸ್ತೆಗಳು, ಸೇತುವೆಗಳು ಮುಳುಗಿ ಅವಘಡ ಸಂಭವಿಸಿರುವ ಕಾರಣ ಮತ್ತು ಮಳೆಗೆ ಮತ್ತಷ್ಟುಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆಯಿಂದ ಭಕ್ತರ ಇರುವಂತೆ ಸೂಚನೆ ನೀಡಲಾಗಿದೆ.
ಪತ್ತನಂತಿಟ್ಟ ಜಿಲ್ಲೆಯಲ್ಲಿ ಎಡಬಿಡದೆ ಭಾರೀ ಮಳೆಯಾಗುತ್ತಿದ್ದು, ಪ್ರಮುಖ ಹೆದ್ದಾರಿಗಳು ಸೇರಿದಂತೆ ರಸ್ತೆಗಳು ಟ್ರಾಫಿಕ್ ಜಾಮ್ ಆಗಿದ್ದು, ಪಂದಳಂ-ಪತ್ತನಂತಿಟ್ಟ-ಮಾವೆಲಿಕ್ಕರ ರಸ್ತೆ ಹಲವು ಕಡೆ ಜಲಾವೃತಗೊಂಡಿದ್ದು, ಶಬರಿಮಲೆ ಯಾತ್ರಿಕರು ಬಳಸುವ ಪ್ರಮುಖ ರಸ್ತೆಗಳಲ್ಲಿ ಇದೂ ಒಂದು. ಭಕ್ತರು ಪಂದಳಂ ವಲಿಯಕೊಯಿಕ್ಕಲ್ ಶಾಸ್ತಾ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಶಬರಿಮಲೆಗೆ ಭೇಟಿ ನೀಡುವುದು ಪದ್ಧತಿಯಾಗಿದೆ. ಆದರೆ ಮಳೆಯಿಂದಾಗಿ ಕಡಕ್ಕಾಡ್ನಲ್ಲಿ ಪಂದಳಂ-ಪತ್ತನಂತಿಟ್ಟ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಶಬರಿಮಲೆ ದೇವಸ್ಥಾನಕ್ಕೆ ಟ್ರೆಕ್ಕಿಂಗ್ ಸ್ವಾಮಿ ಅಯ್ಯಪ್ಪನ್ ರಸ್ತೆಯ ಮೂಲಕ ಮಾತ್ರ ಅನುಮತಿ ನೀಡಲಾಗಿದೆ. ಭಕ್ತರ ದರ್ಶನ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕೇರಳ ಸರ್ಕಾರ ಕೈಗೊಂಡಿದೆ.
ನೂರನಾಡ್, ಚಾರುಮ್ಮೂಡು ಮತ್ತು ಕಾಯಂಕುಲಂ ಪ್ರದೇಶಗಳ ಹಲವು ರಸ್ತೆಗಳು ಹಲವು ಕಡೆಗಳಲ್ಲಿ ಬ್ಲಾಕ್ ಆಗಿವೆ. ಅಚನ್ಕೋವಿಲ್ನ ಕರಾವಳಿ ಪ್ರದೇಶಗಳಾದ ಇರಾಮನ್, ಪ್ರಮದಮ್, ತುಂಪಮೊನ್, ಮುತ್ತಮ್ ಮತ್ತು ಕುಡಸ್ಸನಾಡ್ನ ಹಲವು ಗ್ರಾಮಗಳು ಸಹ ಜಲಾವೃತವಾಗಿವೆ. ಈ ಭಾಗದ ಸಣ್ಣ ರಸ್ತೆಗಳೂ ಜಲಾವೃತವಾಗಿವೆ.
ಪಂದಳಂನಿಂದ ಮಾವೇಲಿಕ್ಕಾರಕ್ಕೆ ಹೋಗುವ ಮಾರ್ಗದಲ್ಲಿ ಐರಾನಿಮುತ್ತಮ್ ಮತ್ತು ಮುದಿಯೂರ್ಕೋಣಂ ಪ್ರದೇಶಗಳಲ್ಲಿ ಪ್ರವಾಹದಿಂದಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ಅಡೂರಿನ ವೈದ್ಯಕೀಯ ಸೇವಾ ನಿಗಮದ ಗೋದಾಮಿಗೆ ನೀರು ನುಗ್ಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಗಳು ನಾಶವಾಗಿದೆ.
ಇನ್ನು ಶಬರಿಮಲೆ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ಭೂಕುಸಿತ ಹಾಗೂ ರಸ್ತೆ ತಡೆ ಆಗುವ ಸಾಧ್ಯತೆ ಇದ್ದು, ಅಡೆತಡೆಗಳನ್ನು ತೆಗೆದುಹಾಕಲು ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಸಿದ್ಧಪಡಿಸಲಾಗಿದೆ.
ಶಬರಿಮಲೆ ಯಾತ್ರೆಗಾಗಿ ಆನ್ ಲೈನ್ ಮೂಲಕ ಬುಕ್ ಮಾಡಿದವರ ಸಂಖ್ಯೆ ಮಂಗಳವಾರಕ್ಕೆ 8,000 ಆಗಿದ್ದು, ಭಕ್ತರ ಸಂಖ್ಯೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…