Featured

ಭಾರೀ ಮಳೆ – ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿತ :  ಇಬ್ಬರು ಬಾಲಕಿಯರು ಸಾವು  – Vishwanews24

ಭಾರೀ ಮಳೆ – ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿತ :  ಇಬ್ಬರು ಬಾಲಕಿಯರು ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಕುಸಿದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಪರ್ವತಮುಖಿ ಪ್ರದೇಶದಲ್ಲಿ ಗುಡ್ಡ ಕುಸಿದು ಶ್ರುತಿ(11), ಜ್ಞಾನಶ್ರೀ(6) ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಕುಮಾರಧಾರಾ ಬಳಿಯಿರುವ ಪರ್ವತಮುಖಿ ಪ್ರದೇಶದಲ್ಲಿ ಗುಡ್ಡ ಕುಸಿದು ಕುಸುಮಧಾರ, ರೂಪಶ್ರೀ ದಂಪತಿಯ ಇಬ್ಬರು ಪುತ್ರಿಯರು ಮೃತಪಟ್ಟಿದ್ದಾರೆ.

ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳೀಯರ ಸಹಕಾರದಿಂದ ಶವಗಳನ್ನು ಹೊರತೆಗೆಯಲಾಗಿದೆ. ಸ್ಥಳಕ್ಕೆ ಪುತ್ತೂರು ಎಸಿ ಗಿರೀಶ್ ನಂದನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ ಪರಿಸರದಲ್ಲಿ ಸೋಮವಾರ ಸಂಜೆಯಿಂದಲೇ ಭಾರೀ ಮಳೆ ಸುರಿಯುತ್ತಿದ್ದು, ಸಂಜೆ 7 ಗಂಟೆ ಸುಮಾರಿಗೆ ಒಮ್ಮೆಲೇ ಭಾರೀ ಜೋರಾದ ಶಬ್ದ ಕೇಳಿಸಿತ್ತು. ಈ ವೇಳೆ ಮನೆಯ ಜಗಲಿಯಲ್ಲಿ ಓದುತ್ತಿದ್ದ ಶ್ರುತಿ ಪುಸ್ತಕವನ್ನು ಅಲ್ಲಿಯೇ ಬಿಟ್ಟು ಶಬ್ದ ಮನೆಯ ಒಳಗಿಂದ ಬಂದಿರಬಹುದು ಎಂದು ಅತ್ತ ಓಡಿದಳು. ಜ್ಞಾನಶ್ರೀ ಮನೆಯ ಒಳಗೆ ಚಾವಡಿಯಲ್ಲಿದ್ದು ದೊಡ್ಡವಳು ಕೂಡ ಅಲ್ಲಿಗೆ ತಲುಪಿದ್ದರು. ಇದೇ ಸಂದರ್ಭ ಗುಡ್ಡ ಮನೆಯ ಮೇಲೆಯೇ ಕುಸಿಸಿದೆ. ಅಡುಗೆಯಲ್ಲಿ ನಿರತರಾಗಿದ್ದ ತಾಯಿ ಅದೇ ಕ್ಷಣ ಶಬ್ದಕ್ಕೆ ಹೆದರಿ ಮಕ್ಕಳು ಹೊರಗಿದ್ದಾರೆ ಎಂದು ಹೊರಗಡೆ ಬಂದಿದ್ದಾರೆ.

ಇನ್ನು ಭಾರೀ ಮಳೆಯಿಂದಾಗಿ ಮರ ಬಿದ್ದು ಹಾಗೂ ನೀರು ಉಕ್ಕಿ ಹರಿದು ಸಂಪರ್ಕ ಸಾಧ್ಯವಿರುವ ಎರಡು ಕಡೆಯಿಂದಲೂ ರಸ್ತೆ ಸಂಪೂರ್ಣವಾಗಿ ಬಂದ್‌ ಆಗಿದ್ದರಿಂದ ಘಟನ ಸ್ಥಳಕ್ಕೆ ಶೀಘ್ರ ತೆರಳಲು ಸಾಧ್ಯವಾಗಿರಲಿಲ್ಲ. ತಡರಾತ್ರಿ ಸುರಿಯುತ್ತಿದ್ದ ಮಳೆಯೂ ರಕ್ಷಣ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.

ಮಣ್ಣಿನಡಿ ಸಿಲುಕಿದ ಸೋದರಿಯರನ್ನು ದೀರ್ಘ‌ ಕಾರ್ಯಾಚರಣೆಯ ಬಳಿಕ ಮೇಲ ಕ್ಕೆತ್ತುವ ಸಂದರ್ಭ ಇಬ್ಬರೂ ಒಬ್ಬರಿಗೊಬ್ಬರು ಕೈ ಕೈ ಹಿಡಿದುಕೊಂಡ ಸ್ಥಿತಿಯಲ್ಲಿರುವುದನ್ನು ಕಂಡು ಎಲ್ಲರ ಕಣ್ಣಂನಲ್ಲಿ ನೀರು ತುಂಬಿತ್ತು.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

1 hour ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

11 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

11 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

11 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago