ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶನಿವಾರ (ಜು.25) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU), ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚುವರಿ ಜಾಗ್ರತೆ ವಹಿಸುವಂತೆ ಕೋರಲಾಗಿದೆ.
ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…