ಹಲವು ದಿನಗಳ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ಭಾರತೀಯ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ತಕ್ಷಣದಿಂದಲೇ ಜಾರಿಗೆ ಬರುವಂತೆ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಇತ್ತೀಚೆಗಷ್ಟೇ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕೂಡ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಅದಾದ ಬಳಿಕ ವಿರಾಟ್ ಕೊಹ್ಲಿ ಕೂಡ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಳಿ ನಿವೃತ್ತಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದಾಗ್ಯೂ, ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಬಿಸಿಸಿಐ ಹೇಳಿತ್ತು ಎನ್ನಲಾಗಿತ್ತು. ಇದೀಗ 36 ವರ್ಷದ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರೇ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗುತ್ತಿರುವುದಾಗಿ ಘೋಷಿಸಿದ್ದು, ಅಭಿಮಾನಿಗಳಲ್ಲಿ ನಿರಾಸೆ ಉಂಟಾಗಿದೆ.
2011ರಲ್ಲಿ ಟೆಸ್ಟ್ಗೆ ಪದಾರ್ಪಣೆ ಮಾಡಿದ ವಿರಾಟ್ ಕೊಹ್ಲಿ ಒಟ್ಟು 123 ಟೆಸ್ಟ್ಗಳನ್ನು ಆಡಿದ್ದಾರೆ. 30 ಶತಕಗಳು ಮತ್ತು 31 ಅರ್ಧಶತಕಗಳು ಸೇರಿದಂತೆ 46.85 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಅವರ ಅತ್ಯಧಿಕ ಸ್ಕೋರ್ 254 ಆಗಿದೆ.
ಕೆಲವು ದಿನಗಳ ಹಿಂದೆ ನಾಯಕ ರೋಹಿತ್ ಶರ್ಮಾ ಕೂಡ ಈ ದೀರ್ಘಾವಧಿಯ ಮಾದರಿಯಿಂದ ಹಿಂದೆ ಸರಿದಿದ್ದರಿಂದ ಈ ಸುದ್ದಿ ಅಭಿಮಾನಿಗಳು ಮತ್ತು ಭಾರತೀಯ ಆಯ್ಕೆದಾರರಿಗೆ ಎರಡು ಬಾರಿ ನೋವುಂಟು ಮಾಡಿತು.
ಟೀಂ ಇಂಡಿಯಾದ ಇಬ್ಬರು ಶ್ರೇಷ್ಠ ಆಟಗಾರರು ಈಗ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ನಿವೃತ್ತಿ ಹೇಳಿರುವುದರಿಂದ, ಅಭಿಮಾನಿಗಳು ಮತ್ತು ಭಾರತೀಯ ಆಯ್ಕೆದಾರರಿಗೆ ನೋವುಂಟು ಮಾಡಿದೆ. ಮುಂಬರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಗೂ ಮುನ್ನವೇ ಈ ಆಘಾತಕಾರಿ ಘೋಷಣೆಗಳು ಹೊರಬಿದ್ದಿದ್ದು, ತಂಡದ ಆಯ್ಕೆದಾರರಿಗೆ ತಲೆನೋವಾಗಿ ಪರಿಣಮಿಸಿದೆ.
ಇನ್ನೂ ವಿರಾಟ್ ಕೊಹ್ಲಿ ಅವರ ನಿವೃತ್ತಿ ಘೋಷಣೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದೆ. ವಿರಾಟ್, ಧನ್ಯವಾದಗಳು. #269. ಟೆಸ್ಟ್ ಕ್ರಿಕೆಟ್ ಮತ್ತೆ ಎಂದಿಗೂ ಮೊದಲಿನಂತೆ ಇರುವುದಿಲ್ಲ! ಎಂದು ಪೋಸ್ಟ್ ಮಾಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…