Featured

ಭಾವನಾತ್ಮಕ ಪೋಸ್ಟ್ ಮೂಲಕ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್ ಕೊಹ್ಲಿ – vishwanews24

ಭಾವನಾತ್ಮಕ ಪೋಸ್ಟ್ ಮೂಲಕ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್ ಕೊಹ್ಲಿ

ಹಲವು ದಿನಗಳ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ಭಾರತೀಯ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ತಕ್ಷಣದಿಂದಲೇ ಜಾರಿಗೆ ಬರುವಂತೆ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಇತ್ತೀಚೆಗಷ್ಟೇ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕೂಡ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಅದಾದ ಬಳಿಕ ವಿರಾಟ್ ಕೊಹ್ಲಿ ಕೂಡ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಳಿ ನಿವೃತ್ತಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದಾಗ್ಯೂ, ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಬಿಸಿಸಿಐ ಹೇಳಿತ್ತು ಎನ್ನಲಾಗಿತ್ತು. ಇದೀಗ 36 ವರ್ಷದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರೇ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿರುವುದಾಗಿ ಘೋಷಿಸಿದ್ದು, ಅಭಿಮಾನಿಗಳಲ್ಲಿ ನಿರಾಸೆ ಉಂಟಾಗಿದೆ.

 

2011ರಲ್ಲಿ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ವಿರಾಟ್ ಕೊಹ್ಲಿ ಒಟ್ಟು 123 ಟೆಸ್ಟ್‌ಗಳನ್ನು ಆಡಿದ್ದಾರೆ. 30 ಶತಕಗಳು ಮತ್ತು 31 ಅರ್ಧಶತಕಗಳು ಸೇರಿದಂತೆ 46.85 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಅವರ ಅತ್ಯಧಿಕ ಸ್ಕೋರ್ 254 ಆಗಿದೆ.

ಕೆಲವು ದಿನಗಳ ಹಿಂದೆ ನಾಯಕ ರೋಹಿತ್ ಶರ್ಮಾ ಕೂಡ ಈ ದೀರ್ಘಾವಧಿಯ ಮಾದರಿಯಿಂದ ಹಿಂದೆ ಸರಿದಿದ್ದರಿಂದ ಈ ಸುದ್ದಿ ಅಭಿಮಾನಿಗಳು ಮತ್ತು ಭಾರತೀಯ ಆಯ್ಕೆದಾರರಿಗೆ ಎರಡು ಬಾರಿ ನೋವುಂಟು ಮಾಡಿತು.

ಟೀಂ ಇಂಡಿಯಾದ ಇಬ್ಬರು ಶ್ರೇಷ್ಠ ಆಟಗಾರರು ಈಗ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ನಿವೃತ್ತಿ ಹೇಳಿರುವುದರಿಂದ, ಅಭಿಮಾನಿಗಳು ಮತ್ತು ಭಾರತೀಯ ಆಯ್ಕೆದಾರರಿಗೆ ನೋವುಂಟು ಮಾಡಿದೆ. ಮುಂಬರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಗೂ ಮುನ್ನವೇ ಈ ಆಘಾತಕಾರಿ ಘೋಷಣೆಗಳು ಹೊರಬಿದ್ದಿದ್ದು, ತಂಡದ ಆಯ್ಕೆದಾರರಿಗೆ ತಲೆನೋವಾಗಿ ಪರಿಣಮಿಸಿದೆ.

ಇನ್ನೂ ವಿರಾಟ್ ಕೊಹ್ಲಿ ಅವರ ನಿವೃತ್ತಿ ಘೋಷಣೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದೆ. ವಿರಾಟ್, ಧನ್ಯವಾದಗಳು. #269. ಟೆಸ್ಟ್ ಕ್ರಿಕೆಟ್ ಮತ್ತೆ ಎಂದಿಗೂ ಮೊದಲಿನಂತೆ ಇರುವುದಿಲ್ಲ! ಎಂದು ಪೋಸ್ಟ್ ಮಾಡಿದೆ.

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

8 minutes ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

20 minutes ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

44 minutes ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

53 minutes ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

1 hour ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

1 hour ago