ಹಲವು ದಿನಗಳ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ಭಾರತೀಯ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ತಕ್ಷಣದಿಂದಲೇ ಜಾರಿಗೆ ಬರುವಂತೆ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಇತ್ತೀಚೆಗಷ್ಟೇ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕೂಡ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಅದಾದ ಬಳಿಕ ವಿರಾಟ್ ಕೊಹ್ಲಿ ಕೂಡ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಳಿ ನಿವೃತ್ತಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದಾಗ್ಯೂ, ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಬಿಸಿಸಿಐ ಹೇಳಿತ್ತು ಎನ್ನಲಾಗಿತ್ತು. ಇದೀಗ 36 ವರ್ಷದ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರೇ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗುತ್ತಿರುವುದಾಗಿ ಘೋಷಿಸಿದ್ದು, ಅಭಿಮಾನಿಗಳಲ್ಲಿ ನಿರಾಸೆ ಉಂಟಾಗಿದೆ.
2011ರಲ್ಲಿ ಟೆಸ್ಟ್ಗೆ ಪದಾರ್ಪಣೆ ಮಾಡಿದ ವಿರಾಟ್ ಕೊಹ್ಲಿ ಒಟ್ಟು 123 ಟೆಸ್ಟ್ಗಳನ್ನು ಆಡಿದ್ದಾರೆ. 30 ಶತಕಗಳು ಮತ್ತು 31 ಅರ್ಧಶತಕಗಳು ಸೇರಿದಂತೆ 46.85 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಅವರ ಅತ್ಯಧಿಕ ಸ್ಕೋರ್ 254 ಆಗಿದೆ.
ಕೆಲವು ದಿನಗಳ ಹಿಂದೆ ನಾಯಕ ರೋಹಿತ್ ಶರ್ಮಾ ಕೂಡ ಈ ದೀರ್ಘಾವಧಿಯ ಮಾದರಿಯಿಂದ ಹಿಂದೆ ಸರಿದಿದ್ದರಿಂದ ಈ ಸುದ್ದಿ ಅಭಿಮಾನಿಗಳು ಮತ್ತು ಭಾರತೀಯ ಆಯ್ಕೆದಾರರಿಗೆ ಎರಡು ಬಾರಿ ನೋವುಂಟು ಮಾಡಿತು.
ಟೀಂ ಇಂಡಿಯಾದ ಇಬ್ಬರು ಶ್ರೇಷ್ಠ ಆಟಗಾರರು ಈಗ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ನಿವೃತ್ತಿ ಹೇಳಿರುವುದರಿಂದ, ಅಭಿಮಾನಿಗಳು ಮತ್ತು ಭಾರತೀಯ ಆಯ್ಕೆದಾರರಿಗೆ ನೋವುಂಟು ಮಾಡಿದೆ. ಮುಂಬರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಗೂ ಮುನ್ನವೇ ಈ ಆಘಾತಕಾರಿ ಘೋಷಣೆಗಳು ಹೊರಬಿದ್ದಿದ್ದು, ತಂಡದ ಆಯ್ಕೆದಾರರಿಗೆ ತಲೆನೋವಾಗಿ ಪರಿಣಮಿಸಿದೆ.
ಇನ್ನೂ ವಿರಾಟ್ ಕೊಹ್ಲಿ ಅವರ ನಿವೃತ್ತಿ ಘೋಷಣೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದೆ. ವಿರಾಟ್, ಧನ್ಯವಾದಗಳು. #269. ಟೆಸ್ಟ್ ಕ್ರಿಕೆಟ್ ಮತ್ತೆ ಎಂದಿಗೂ ಮೊದಲಿನಂತೆ ಇರುವುದಿಲ್ಲ! ಎಂದು ಪೋಸ್ಟ್ ಮಾಡಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…