Featured

ಭೀಕರ ಅಪಘಾತ : ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಮುಂದಿದ್ದ ಲಾರಿಗೆ ಡಿಕ್ಕಿ ; ಒಂಬತ್ತು ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು -Vishwanews24

ಪುಣೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಬಳಿಕ ಮುಂದಿದ್ದ ಟ್ರಕ್‍ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ 9 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಬರುವ ಕದಂವಕ್​ ವಸ್ತಿ ಗ್ರಾಮದ ಬಳಿ ಜು.20 ರ ಶುಕ್ರವಾರ ತಡರಾತ್ರಿ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ದತ್ತ ಗಣೇಶ್​ ಯಾದವ್​, ಜುಬೇರ್ ಅಜೀಜ್ ಮುಲಾನಿ,ನಿಖಿಲ್​ ಚಂದ್ರಕಾಂತ್​, ಅಕ್ಷಯ್​ ಭರತ್​ ವೈಕರ್​, ವಿಶಾಲ್​ ಸುಭಾಷ್​ ಯಾದವ್​, ಪರ್ವೇಜ್​ ಅತ್ತರ್​, ನೂರ್​ ಮಹಮ್ಮದ್​ ಅಬ್ಬಾಸ್​ ದಯಾ, ಶುಭಂ ರಾಮ್​ದಾಸ್​ ಭಿಸೆ, ಅಕ್ಷಯ್​ ಚಂದ್ರಕಾಂತ್​ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಪುಣೆಯ ಯಾವತ್ ಗ್ರಾಮದವರಾಗಿದ್ದಾರೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳು ಪುಣೆಯಿಂದ ರಾಯ್‍ಗಢ್‍ಗೆ ತೆರಳಿ ವಾಪಸ್ ಆಗುತ್ತಿದ್ದ ಸಂದರ್ಭ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ 9 ವಿದ್ಯಾರ್ಥಿಗಳೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಬಳಿಕ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಈ ಕುರಿತು ಪುಣೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago