ಬೆಂಗಳೂರು: ನೆಲಮಂಗಲದ ಮಾದಾವರ ಬಳಿ ಭಾರೀ ಅಪಘಾತ ಸಂಭವಿಸಿದೆ. ಸಹೋದರನ ಮನೆಯಿಂದ ಊಟ ಮುಗಿಸಿ ಬರುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಹುಡುಗಿಯೊಬ್ಬಳು ಸುಟ್ಟು ಕರಕಲಾದ ದಾರುಣ ಘಟನೆ ನಡೆದಿದೆ.
ಬೆಂಗಳೂರು- ತುಮಕೂರು ಹೈವೆಯ ಮಾದಾವರ ಟೋಲ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಓಮ್ನಿ ಕಾರಿಗೆ ಬಲೆನೋ ಕಾರು ಹಿಂಬದಿಯಿಂದ ಡಿಕ್ಕಿಯೊಡೆದ ಪರಿಣಾಮ ಓಮ್ನಿಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣ ಮಾಡ್ತಿದ್ರು. ಏಳು ಜನಕ್ಕೆ ಸುಟ್ಟ ಗಾಯಗಳಾಗಿದ್ರೇ 15 ವರ್ಷದ ಹುಡುಗಿಯೊಬ್ಬಳು ಸಜೀವ ದಹನವಾಗಿದ್ದಾಳೆ.
ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡ್ತಿದ್ದ 8 ಜನರಲ್ಲಿ ದಿವ್ಯಾ ಸಾವನ್ನಪ್ಪಿದ್ರೆ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್ ಹಾಗೂ ಶಾಂತಿಲಾಲ್ ಗಾಯಾಳುಗಳಾಗಿದ್ದಾರೆ. ಇವರಲ್ಲಿ ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಮಾದಾವರದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳುಗಳೆಲ್ಲರೂ ಗುಜರಾತಿ ಮೂಲದ ಕುಟುಂಬದವರು.
ಸ್ಥಳಕ್ಕೆ ಬೇಟಿ ಕೊಟ್ಟು ಪರಿಶೀಲನೆ ನಡೆಸಿದ ಬೆಂಗಳೂರು ಗ್ರಾಮಾಂತರ ಎಸ್. ಪಿ ಮಲ್ಲಿಕಾರ್ಜುನ್ ಬಾಲಾದಂಡಿ ನಂತರ ಘಟನೆಯ ವಿವರ ನೀಡಿದ್ರು. ತುಮಕೂರು ರಸ್ತೆ ಹೈವೇಯಲ್ಲಿ 10ಗಂಟೆ ರಾತ್ರಿಯಲ್ಲಿ ಘಟನೆ ನಡೆದಿದೆ. ಬಲೆನೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಮುಂದಿದ್ದ ಕಾರು ಎರಡು ಮೂರು ಪಲ್ಟಿ ಆಗಿದ್ದು ನಂತರ ಬೆಂಕಿ ಹತ್ತಿಕೊಂಡಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…