ಕಾಬೂಲ್: ಭೀಕರ ಭೂಕಂಪದಿಂದ ತತ್ತರಿಸಿರುವ ಅಫ್ಘಾನಿಸ್ತಾನದ ಜನತೆಗೆ ಭಾರತ ನೆರವಿನ ಹಸ್ತ ಚಾಚಿದೆ. ಭಾರತವು ಶುಕ್ರವಾರ ಎರಡನೇ ಬಾರಿಗೆ ಅಗತ್ಯ ವಸ್ತುಗಳನ್ನು ಅಫ್ಘಾನ್ ಸಂತ್ರಸ್ತರಿಗಾಗಿ ರವಾನಿಸಿದೆ.
ಅಫ್ಘಾನಿಸ್ತಾನದ ಪೂರ್ವ ಭಾಗದಲ್ಲಿ ಭಾರಿ ಭೂಕಂಪ ಸಂಭವಿಸಿ 1,000ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಭೂಕಂಪದಿಂದಾಗಿ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನೆರವು ನೀಡಲು ಭಾರತ ಮುಂದಾಗಿದ್ದು, ಈಗಾಗಲೇ ತಂಡವೊಂದು ಕಾಬೂಲ್ ತಲುಪಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ರಿಡ್ಜ್ ಟೆಂಟ್ಗಳು, ಸ್ಲೀಪಿಂಗ್ ಬ್ಯಾಗ್ಸ್, ಹೊದಿಕೆಗಳು, ಸ್ಲೀಪಿಂಗ್ ಮ್ಯಾಟ್ ಸೇರಿದಂತೆ ಇತ್ಯಾದಿ ಅಗತ್ಯ ವಸ್ತುಗಳನ್ನು ಅಪ್ಘಾನ್ ಜನತೆಗೆ ನೆರವಿಗಾಗಿ ರವಾನಿಸಲಾಗಿದೆ. ಪರಿಹಾರ ಸರಕನ್ನು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (UNOCHA) ಮತ್ತು ಕಾಬೂಲ್ನಲ್ಲಿರುವ ಅಫ್ಘಾನ್ ರೆಡ್ ಕ್ರೆಸೆಂಟ್ ಸೊಸೈಟಿ (ARCS)ಗೆ ಹಸ್ತಾಂತರಿಸಲಾಗುವುದು.
ಜೂನ್ 22, 2022 ರಂದು ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟರು, ಸಾವಿರಾರು ಮಂದಿ ತೊಂದರೆಗೆ ಸಿಲುಕಿದ್ದಾರೆ. ಸಂತ್ರಸ್ತರಿಗಾಗಿ ಭಾರತ ಸರ್ಕಾರವು ಎರಡು ವಿಮಾನಗಳಲ್ಲಿ 27 ಟನ್ ತುರ್ತು ಪರಿಹಾರ ರವಾನಿಸಿದೆ ಎಂದು ಎಂಇಎ ತಿಳಿಸಿದೆ.
ಅಫ್ಘಾನಿಸ್ತಾನಕ್ಕೆ ಮಾನವೀಯ ಸಹಾಯ ಒದಗಿಸಲು ತನ್ನ ತಾಂತ್ರಿಕ ತಂಡವನ್ನು ಕಳುಹಿಸಿದ ಭಾರತದ ನಿರ್ಧಾರವನ್ನು ತಾಲಿಬಾನ್ ಸ್ವಾಗತಿಸಿದೆ. ಸಂಕಷ್ಟಕ್ಕೆ ಸಿಲುಕಿರುವ ಆಫ್ಘನ್ನರ ರಕ್ಷಣೆಗೆ ರಾಜತಾಂತ್ರಿಕರು ಮತ್ತು ತಾಂತ್ರಿಕ ತಂಡವನ್ನು ಕಾಬೂಲ್ನಲ್ಲಿರುವ ರಾಯಭಾರಿ ಕಚೇರಿಗೆ ಕಳುಹಿಸಿರುವ ಭಾರತದ ನಿರ್ಧಾರ ಸ್ವಾಗತಾರ್ಹ ಎಂದು ತಾಲಿಬಾನ್ ವಕ್ತಾರ ಅಬ್ದುಲ್ ಕಹರ್ ಬಾಲ್ಚಿ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…