Featured

ಭೀಕರ ಭೂಕಂಪದಿಂದ ತತ್ತರಿಸಿರುವ ಅಫ್ಘಾನಿಸ್ತಾನದ ಜನತೆಗೆ ನೆರವಿನ ಹಸ್ತ ಚಾಚಿದ ಭಾರತ – Vishwanews24

ಭೀಕರ ಭೂಕಂಪದಿಂದ ತತ್ತರಿಸಿರುವ ಅಫ್ಘಾನಿಸ್ತಾನದ ಜನತೆಗೆ  ನೆರವಿನ ಹಸ್ತ ಚಾಚಿದ ಭಾರತ ..

ಎರಡನೇ ಬಾರಿ ಅಫ್ಘಾನ್‌ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ರವಾನೆ ..

ಭಾರತಕ್ಕೆ ಧನ್ಯವಾದ ತಿಳಿಸಿದ ತಾಲಿಬಾನ್‌..

ಕಾಬೂಲ್‌: ಭೀಕರ ಭೂಕಂಪದಿಂದ ತತ್ತರಿಸಿರುವ ಅಫ್ಘಾನಿಸ್ತಾನದ ಜನತೆಗೆ ಭಾರತ ನೆರವಿನ ಹಸ್ತ ಚಾಚಿದೆ. ಭಾರತವು ಶುಕ್ರವಾರ ಎರಡನೇ ಬಾರಿಗೆ ಅಗತ್ಯ ವಸ್ತುಗಳನ್ನು ಅಫ್ಘಾನ್‌ ಸಂತ್ರಸ್ತರಿಗಾಗಿ ರವಾನಿಸಿದೆ.

ಅಫ್ಘಾನಿಸ್ತಾನದ ಪೂರ್ವ ಭಾಗದಲ್ಲಿ ಭಾರಿ ಭೂಕಂಪ ಸಂಭವಿಸಿ 1,000ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಭೂಕಂಪದಿಂದಾಗಿ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನೆರವು ನೀಡಲು ಭಾರತ ಮುಂದಾಗಿದ್ದು, ಈಗಾಗಲೇ ತಂಡವೊಂದು ಕಾಬೂಲ್‌ ತಲುಪಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ರಿಡ್ಜ್ ಟೆಂಟ್‌ಗಳು, ಸ್ಲೀಪಿಂಗ್‌ ಬ್ಯಾಗ್ಸ್‌, ಹೊದಿಕೆಗಳು, ಸ್ಲೀಪಿಂಗ್‌ ಮ್ಯಾಟ್‌ ಸೇರಿದಂತೆ ಇತ್ಯಾದಿ ಅಗತ್ಯ ವಸ್ತುಗಳನ್ನು ಅಪ್ಘಾನ್‌ ಜನತೆಗೆ ನೆರವಿಗಾಗಿ ರವಾನಿಸಲಾಗಿದೆ. ಪರಿಹಾರ ಸರಕನ್ನು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (UNOCHA) ಮತ್ತು ಕಾಬೂಲ್‌ನಲ್ಲಿರುವ ಅಫ್ಘಾನ್ ರೆಡ್ ಕ್ರೆಸೆಂಟ್ ಸೊಸೈಟಿ (ARCS)ಗೆ ಹಸ್ತಾಂತರಿಸಲಾಗುವುದು.

ಜೂನ್ 22, 2022 ರಂದು ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟರು, ಸಾವಿರಾರು ಮಂದಿ ತೊಂದರೆಗೆ ಸಿಲುಕಿದ್ದಾರೆ. ಸಂತ್ರಸ್ತರಿಗಾಗಿ ಭಾರತ ಸರ್ಕಾರವು ಎರಡು ವಿಮಾನಗಳಲ್ಲಿ 27 ಟನ್ ತುರ್ತು ಪರಿಹಾರ ರವಾನಿಸಿದೆ ಎಂದು ಎಂಇಎ ತಿಳಿಸಿದೆ.

ಅಫ್ಘಾನಿಸ್ತಾನಕ್ಕೆ ಮಾನವೀಯ ಸಹಾಯ ಒದಗಿಸಲು ತನ್ನ ತಾಂತ್ರಿಕ ತಂಡವನ್ನು ಕಳುಹಿಸಿದ ಭಾರತದ ನಿರ್ಧಾರವನ್ನು ತಾಲಿಬಾನ್ ಸ್ವಾಗತಿಸಿದೆ. ಸಂಕಷ್ಟಕ್ಕೆ ಸಿಲುಕಿರುವ ಆಫ್ಘನ್ನರ ರಕ್ಷಣೆಗೆ ರಾಜತಾಂತ್ರಿಕರು ಮತ್ತು ತಾಂತ್ರಿಕ ತಂಡವನ್ನು ಕಾಬೂಲ್‌ನಲ್ಲಿರುವ ರಾಯಭಾರಿ ಕಚೇರಿಗೆ ಕಳುಹಿಸಿರುವ ಭಾರತದ ನಿರ್ಧಾರ ಸ್ವಾಗತಾರ್ಹ ಎಂದು ತಾಲಿಬಾನ್‌ ವಕ್ತಾರ ಅಬ್ದುಲ್‌ ಕಹರ್‌ ಬಾಲ್ಚಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

11 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

12 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

12 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

13 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

13 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago