Featured

ಭೀಕರ ರಸ್ತೆ ಅಪಘಾತ ; ನಾಲ್ವರ ದುರ್ಮರಣ

ಬೆಂಗಳೂರು: ಓಮ್ನಿಗೆ ಹಿಂದಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ದೇವನಹಳ್ಳಿ ತಾಲೂಕಿನ ಕನ್ನಮಂಗಲಪಾಳ್ಯ ಬಳಿ ನಡೆದಿದೆ.

ಮಧ್ಯರಾತ್ರಿ ಸುಮಾರು 1.30ಗಂಟೆಗೆ ಅಪಘಾತ ಸಂಭವಿಸಿದ್ದು, ಓಮ್ನಿಯಲ್ಲಿದ್ದ ಸುಂದರ್(25), ಸತೀಶ್(24), ವೆಂಕಟೇಶ್(28)​​, ವಿಕಾಸ್​​(23) ಮೃತರು. ಮೃತರೆಲ್ಲ ಬೆಂಗಳೂರು ನಿವಾಸಿಗಳಾಗಿದ್ದು, ಫ್ಲವರ್ ಡೆಕೋರೇಶನ್​ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಹೇಮಂತ್​, ಅಜಿತ್​, ರವಿ ಹಾಗೂ ಇನ್ನೋವಾ ಕಾರಿನಲ್ಲಿದ್ದ ಅವಿನಾಶ್​, ಮನೋಜ್​, ಹಿಂದೂಧರ್​, ಮಧು ಎಂಬುವವರು ಗಾಯಗೊಂಡಿದ್ದು, ಅವರನ್ನು ದೇವನಹಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತನ ಜನ್ಮದಿನದ ಪಾರ್ಟಿ ಮುಗಿಸಿ ಓಮ್ನಿಯಲ್ಲಿ ನಂದಿಹಿಲ್ಸ್​ ರಸ್ತೆಯಲ್ಲಿ ಬರುತ್ತಿದ್ದಾಗ ಹಿಂದಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

vishwanews24
Vishwa News 24

Recent Posts

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

4 minutes ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

23 minutes ago

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago