ಬೆಂಗಳೂರು: ಓಮ್ನಿಗೆ ಹಿಂದಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ದೇವನಹಳ್ಳಿ ತಾಲೂಕಿನ ಕನ್ನಮಂಗಲಪಾಳ್ಯ ಬಳಿ ನಡೆದಿದೆ.
ಮಧ್ಯರಾತ್ರಿ ಸುಮಾರು 1.30ಗಂಟೆಗೆ ಅಪಘಾತ ಸಂಭವಿಸಿದ್ದು, ಓಮ್ನಿಯಲ್ಲಿದ್ದ ಸುಂದರ್(25), ಸತೀಶ್(24), ವೆಂಕಟೇಶ್(28), ವಿಕಾಸ್(23) ಮೃತರು. ಮೃತರೆಲ್ಲ ಬೆಂಗಳೂರು ನಿವಾಸಿಗಳಾಗಿದ್ದು, ಫ್ಲವರ್ ಡೆಕೋರೇಶನ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಹೇಮಂತ್, ಅಜಿತ್, ರವಿ ಹಾಗೂ ಇನ್ನೋವಾ ಕಾರಿನಲ್ಲಿದ್ದ ಅವಿನಾಶ್, ಮನೋಜ್, ಹಿಂದೂಧರ್, ಮಧು ಎಂಬುವವರು ಗಾಯಗೊಂಡಿದ್ದು, ಅವರನ್ನು ದೇವನಹಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತನ ಜನ್ಮದಿನದ ಪಾರ್ಟಿ ಮುಗಿಸಿ ಓಮ್ನಿಯಲ್ಲಿ ನಂದಿಹಿಲ್ಸ್ ರಸ್ತೆಯಲ್ಲಿ ಬರುತ್ತಿದ್ದಾಗ ಹಿಂದಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…