ಕುಂದಾಪುರ :ಭೂಕುಸಿತದಿಂದ ರಸ್ತೆ ಮುಚ್ಚಿರುವ ಕಾರಣ ಬೆಂಗಳೂರು ಮತ್ತು ಉಡುಪಿ ಜಿಲ್ಲೆಯನ್ನು ಮರು-ಸಂಪರ್ಕಿಸಲು ಪಡೀಲ್ ಬೈಪಾಸ್ ಮೂಲಕ ಕುಂದಾಪುರ ಮತ್ತು ಬೆಂಗಳೂರು ನಡುವೆ ವಿಶೇಷ ರಾತ್ರಿ ರೈಲು ಪ್ರಯಾಣ ಆರಂಭಿಸಬೇಕು ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸೌತ್ ವೆಸ್ಟರ್ನ್ ರೈಲ್ವೇಸ್ ನ ಜನರಲ್ ಮ್ಯಾನೇಜರ್ ಗೆ ಪತ್ರ ಬರೆದಿದ್ದಾರೆ.
ಕುಂದಾಪುರ-ಬೆಂಗಳೂರು ನಡುವೆ ಭೂಕುಸಿತ ಹಾಗೂ ಹಲವು ರಸ್ತೆಗಳು ಬಂದ್ ಆಗಿರುವುದರಿಂದ ರಸ್ತೆ ಸಾರಿಗೆಯನ್ನೇ ನಂಬಿಕೊಂಡಿರುವ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ. ಈ ಎರಡು ಪ್ರಮುಖ ಸ್ಥಳಗಳ ನಡುವೆ ಪ್ರಯಾಣಕ್ಕೆ ಅನುಕೂಲವಾಗುವಂತೆ ಉಡುಪಿ ಮತ್ತು ಕುಂದಾಪುರವನ್ನು ಬೆಂಗಳೂರಿಗೆ ಪಡೀಲ್ ಬೈಪಾಸ್ ಮೂಲಕ ಸಂಪರ್ಕಿಸಲು ವಿಶೇಷ ರಾತ್ರಿ ರೈಲು ಸೇವೆಯನ್ನು ಆರಂಭಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರಿನಿಂದ ಕಾರವಾರಕ್ಕೆ ರಾತ್ರಿ ವಿಶೇಷ ರೈಲು ಆರಂಭಿಸಬೇಕು ಎಂಬುದಾಗಿ ಈ ಹಿಂದೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತ ರಕ್ಷಣಾ ಸಮಿತಿ ಮನವಿ ಮಾಡಿತ್ತು.
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…