ಭೂಗತ ಪಾತಕಿ ರವಿ ಪೂಜಾರಿ ರಾಜ್ಯ ಪೊಲೀಸರ ವಶಕ್ಕೆ -Vishwanews24
ಬೆಂಗಳೂರು: ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ದಕ್ಷಿಣ ಆಫ್ರಿಕಾದ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಸೋಮವಾರ ನಸುಕಿನಲ್ಲಿ ನಗರಕ್ಕೆ ಕರೆದುಕೊಂಡು ಬಂದಿದ್ದಾರೆ.
ರವಿ ಪೂಜಾರಿಯನ್ನು ಎಡಿಜಿಪಿ ಅಮರ್ ಕುಮಾರ್ ಪಾಂಡೆ, ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ನೇತೃತ್ವದ ತಂಡ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ.
ಇಂದು ರವಿ ಪೂಜಾರಿಯನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಶಾಸಕರಾದ ತನ್ವೀರ್ ಸೇಠ್, ಹೆಚ್ಎಂ ರೇವಣ್ಣ, ಮಾಜಿ ಶಾಸಕ ಅನಿಲ್ ಲಾಡ್ಗೆ ಹಣಕ್ಕೆ ಬೆದರಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದ. ಮಲ್ಪೆ ಮೂಲದ ಈ ಗ್ಯಾಂಗ್ಸ್ಟರ್ ವಿರುದ್ಧ ಮಂಗಳೂರಿನಲ್ಲಿ 39, ಬೆಂಗಳೂರಿನಲ್ಲಿ 38 ಕೇಸ್ ಇವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಪ್ರಕರಣಗಳು ಪೂಜಾರಿ ವಿರುದ್ದ ದಾಖಲಾಗಿದ್ದು ಮಂಗಳೂರು ನಗರ, ಮುಲ್ಕಿ, ಮೂಡಬಿದರೆ, ಬರ್ಕೆ, ಕೋಣಾಚೆ, ಊರ್ವ, ಕಾವೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 33ಕ್ಕೂ ಹೆಚ್ಚು ಪ್ರಕರಣಗಳಿವೆ. ಸುಮಾರು ಒಂದು ವರ್ಷದಿಂದ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕೇಂದ್ರದ ತನಿಖಾ ಸಂಸ್ಥೆಗಳು ನಿರಂತರವಾಗಿ ರವಿ ಪೂಜಾರಿಯನ್ನು ಭಾರತಕ್ಕೆ ಕರೆತರಲು ಪ್ರಯತ್ನ ನಡೆಸಿತ್ತು.
