Featured

ಭೂತಾನ್‌ಗೆ ಉಡುಗೊರೆಯಾಗಿ ಭಾರತದಿಂದ ಕೋವಿಡ್-19 ಲಸಿಕೆ ರವಾನೆ -Vishwanews24

ಭೂತಾನ್‌ಗೆ ಉಡುಗೊರೆಯಾಗಿ ಭಾರತದಿಂದ ಕೋವಿಡ್-19 ಲಸಿಕೆ ರವಾನೆ -Vishwanews24

ಮುಂಬೈ: ನೆರೆಯ ಭೂತಾನ್ ರಾಷ್ಟ್ರಕ್ಕೆ ಉಡುಗೊರೆಯಾಗಿ ಭಾರತ ಕೋವಿಡ್-19 ಲಸಿಕೆಯನ್ನು ರವಾನಿಸಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ಮುಂಜಾನೆ 1.5 ಲಕ್ಷ ಕೋವಿಡ್-19 ಲಸಿಕೆಯ ‘ಕೋವಿಶೀಲ್ಡ್‌’ ಡೋಸೇಜ್‌ಗಳನ್ನು ರವಾನಿಸಲಾಯಿತು.

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋವಿಶೀಲ್ಡ್ ಲಸಿಕೆಯ 1.5 ಲಕ್ಷ ಡೋಸೇಜ್‌ಗಳನ್ನು ಬುಧವಾರ ಭೂತಾನ್‌ಗೆ ರವಾನಿಸಲಾಗಿದ್ದು ಕೊರೊನಾ ಲಸಿಕೆಯನ್ನು ಉಡುಗೊರೆಯಾಗಿ ಪಡೆದ ಮೊದಲ ರಾಷ್ಟ್ರ ಎಂಬ ಗೌರವಕ್ಕೆ ಭೂತಾನ್ ಪಾತ್ರವಾಗಿದೆ.

ಭಾರತ ಹಾಗೂ ಭೂತಾನ್‌ ಅನ್ಯೋನ್ಯ ಬಾಂಧವ್ಯವನ್ನು ಹೊಂದಿದ್ದು, ಕೊರೊನಾ ಸಂದರ್ಭದಲ್ಲೂ ಅಗತ್ಯ ವಸ್ತುಗಳ ಪೂರೈಕೆ ಮಾಡಿದೆ. ಕೊರೊನಾ ಸಂದರ್ಭದಲ್ಲೂ ಭಾರತದಿಂದ ಭೂತಾನ್‌ಗೆ 2.8 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ಪಿಪಿಇ ಕಿಟ್, ಎನ್‌95 ಮಾಸ್ಕ್ ಸೇರಿದಂತೆ ಅಗತ್ಯ ಔಷಧಿ ಹಾಗೂ ವೈದ್ಯಕೀಯ ಸಾಮಾಗ್ರಿಗಳನ್ನು ಭಾರತದಿಂದ ಸಾಗಾಟ ಮಾಡಲಾಗಿದೆ. ಹಾಗೆಯೇ ಇಲ್ಲಿದ್ದ ೨ ಸಾವಿರ ಭೂತಾನ್‌ ಪ್ರಜೆಗಳನ್ನು ಕೂಡಾ ಸುರಕ್ಷಿತವಾಗಿ ಸರ್ಕಾರ ಕಳುಹಿಸಿಕೊಟ್ಟಿದೆ.

ಕೋವಿಡ್-19 ಲಸಿಕೆ ಉಡುಗೊರೆಯಾಗಿ ಪಡೆದ ಮೊದಲ ರಾಷ್ಟ್ರವೆಂಬ ಗೌರವಕ್ಕೆ ಭೂತಾನ್ ಪಾತ್ರವಾಗಿದೆ. ಭೂತಾನ್ ಜೊತೆಗೆ ಅನ್ಯೋನ್ಯ ಬಾಂಧವ್ಯ ಕಾಪಾಡಿರುವ ಭಾರತ, ಕೋವಿಡ್-19 ನಿರ್ಬಂಧಗಳ ಹೊರತಾಗಿಯೂ ನಿರಂತರ ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ಬದ್ಧತೆಯನ್ನು ಪ್ರದರ್ಶಿಸಿದೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯನ್ನು ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸುತ್ತಿದೆ. ಈ ಮೊದಲು ವಿಶ್ವದ ಅತಿ ದೊಡ್ಡ ಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೂತಾನ್ ಪ್ರಧಾನಿ ಲೊಟೆ ಶೆರಿಂಗ್ ಅಭಿನಂದಿಸಿದ್ದರು.

http://ಮಂಗಳೂರು: ಗೋರಕ್ಷಕ ಕಾರ್ಯಕರ್ತರ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು: ಪ್ರಭು ಚೌವ್ಹಾಣ್ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago