ಮುಂಬೈ: ನೆರೆಯ ಭೂತಾನ್ ರಾಷ್ಟ್ರಕ್ಕೆ ಉಡುಗೊರೆಯಾಗಿ ಭಾರತ ಕೋವಿಡ್-19 ಲಸಿಕೆಯನ್ನು ರವಾನಿಸಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ಮುಂಜಾನೆ 1.5 ಲಕ್ಷ ಕೋವಿಡ್-19 ಲಸಿಕೆಯ ‘ಕೋವಿಶೀಲ್ಡ್’ ಡೋಸೇಜ್ಗಳನ್ನು ರವಾನಿಸಲಾಯಿತು.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋವಿಶೀಲ್ಡ್ ಲಸಿಕೆಯ 1.5 ಲಕ್ಷ ಡೋಸೇಜ್ಗಳನ್ನು ಬುಧವಾರ ಭೂತಾನ್ಗೆ ರವಾನಿಸಲಾಗಿದ್ದು ಕೊರೊನಾ ಲಸಿಕೆಯನ್ನು ಉಡುಗೊರೆಯಾಗಿ ಪಡೆದ ಮೊದಲ ರಾಷ್ಟ್ರ ಎಂಬ ಗೌರವಕ್ಕೆ ಭೂತಾನ್ ಪಾತ್ರವಾಗಿದೆ.
ಭಾರತ ಹಾಗೂ ಭೂತಾನ್ ಅನ್ಯೋನ್ಯ ಬಾಂಧವ್ಯವನ್ನು ಹೊಂದಿದ್ದು, ಕೊರೊನಾ ಸಂದರ್ಭದಲ್ಲೂ ಅಗತ್ಯ ವಸ್ತುಗಳ ಪೂರೈಕೆ ಮಾಡಿದೆ. ಕೊರೊನಾ ಸಂದರ್ಭದಲ್ಲೂ ಭಾರತದಿಂದ ಭೂತಾನ್ಗೆ 2.8 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ಪಿಪಿಇ ಕಿಟ್, ಎನ್95 ಮಾಸ್ಕ್ ಸೇರಿದಂತೆ ಅಗತ್ಯ ಔಷಧಿ ಹಾಗೂ ವೈದ್ಯಕೀಯ ಸಾಮಾಗ್ರಿಗಳನ್ನು ಭಾರತದಿಂದ ಸಾಗಾಟ ಮಾಡಲಾಗಿದೆ. ಹಾಗೆಯೇ ಇಲ್ಲಿದ್ದ ೨ ಸಾವಿರ ಭೂತಾನ್ ಪ್ರಜೆಗಳನ್ನು ಕೂಡಾ ಸುರಕ್ಷಿತವಾಗಿ ಸರ್ಕಾರ ಕಳುಹಿಸಿಕೊಟ್ಟಿದೆ.
ಕೋವಿಡ್-19 ಲಸಿಕೆ ಉಡುಗೊರೆಯಾಗಿ ಪಡೆದ ಮೊದಲ ರಾಷ್ಟ್ರವೆಂಬ ಗೌರವಕ್ಕೆ ಭೂತಾನ್ ಪಾತ್ರವಾಗಿದೆ. ಭೂತಾನ್ ಜೊತೆಗೆ ಅನ್ಯೋನ್ಯ ಬಾಂಧವ್ಯ ಕಾಪಾಡಿರುವ ಭಾರತ, ಕೋವಿಡ್-19 ನಿರ್ಬಂಧಗಳ ಹೊರತಾಗಿಯೂ ನಿರಂತರ ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ಬದ್ಧತೆಯನ್ನು ಪ್ರದರ್ಶಿಸಿದೆ.
ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯನ್ನು ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸುತ್ತಿದೆ. ಈ ಮೊದಲು ವಿಶ್ವದ ಅತಿ ದೊಡ್ಡ ಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೂತಾನ್ ಪ್ರಧಾನಿ ಲೊಟೆ ಶೆರಿಂಗ್ ಅಭಿನಂದಿಸಿದ್ದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…