Featured

ಭೂಮಿಯಲ್ಲಿದ್ದುಕೊಂಡೇ ಅಂತರಿಕ್ಷದಲ್ಲಿ ಸೆಲ್ಫಿ ತೆಗೆಯಿರಿ!

ವಾಷಿಂಗ್ಟನ್,: ವರ್ಚುವಲ್ ಸ್ಪೇಸ್‍ಸೂಟ್‍ನಲ್ಲಿ ಅದ್ಭುತ ನಕ್ಷತ್ರಪುಂಜಗಳ ನಡುವೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅವಕಾಶ ಮಾಡಿಕೊಡುವ ವಿನೂತನ ಆಯಪ್ ಇದೀಗ ಲಭ್ಯವಿದೆ. ವಿಶ್ವದ ಅಗ್ರಗಣ್ಯ ಬಾಹ್ಯಾಕಾಶ ಸಂಸ್ಥೆಗಳಲ್ಲೊಂದಾದ ‘ನಾಸಾ’ ಇದನ್ನು ಬಿಡುಗಡೆ ಮಾಡಿದೆ. ಸೌರಮಂಡಲದ ವಿವಿಧ ಸ್ಥಳಗಳಲ್ಲಿ ಅಂದರೆ ‘ಒರಿಯನ್ ನೆಬುಲಾ’ ಅಥವಾ ಸೌರಮಂಡಲದ ಮಧ್ಯಭಾಗದಲ್ಲಿ ನಿಂತು ಸೆಲ್ಫಿ ತೆಗೆಸಿಕೊಂಡ ಅನುಭವವನ್ನು ಇದು ನೀಡುತ್ತದೆ.

NASA Selfies ಹೆಸರಿನ ಈ ಆಯಪ್ ಜತೆಗೆ, ಅಮೆರಿಕದ ಈ ಬಾಹ್ಯಾಕಾಶ ಸಂಸ್ಥೆ ಎಕ್ಸೋಪ್ಲಾನೆಟ್ ಎಕ್ಸ್‍ಕರ್‍ಷನ್ಸ್ ವರ್ಚುವಲ್ ರಿಯಾಲಿಟಿ (ವಿಆರ್) ಎಂಬ ಆಯಪ್ ಕೂಡಾ ಬಿಡುಗಡೆ ಮಾಡಿದೆ. ಇದು ವಿಆರ್ ಬಳಕೆದಾರರನ್ನು ಟ್ರಾಪಿಸ್ಟ್-1 ಗ್ರಹಮಂಡಲದಲ್ಲಿ ಮಾರ್ಗದರ್ಶನ ಸಹಿತ ಯಾನ ಕೈಗೊಳ್ಳಲು ಅವಕಾಶ ಮಾಡಿಕೊಡುತ್ತದೆ.

ಸ್ಪಿಟ್ಸರ್ ಬಾಹ್ಯಾಕಾಶ ಟೆಲೆಸ್ಕೋಪ್‍ಗೆ ಚಾಲನೆ ನೀಡಿದ 15ನೇ ವರ್ಷಾಚರಣೆಗಾಗಿ ಈ ಡಿಜಿಟಲ್ ಉತ್ಪನ್ನಗಳನ್ನು ಸೃಷ್ಟಿಸಲಾಗಿದೆ ಎಂದು ನಾಸಾ ಹೇಳಿದೆ.

ಸೆಲ್ಫಿ ಆಯಪ್‍ನ ಸರಳ ಇಂಟರ್‍ಫೇಸ್, ನೀವು ಫೋಟೊ ಕ್ಲಿಕ್ಕಿಸಿಕೊಂಡು, ನಿಮ್ಮ ಆಯ್ಕೆಯ ಹಿನ್ನೆಲೆಯನ್ನು ಸೃಷ್ಟಿಸಲು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅದನ್ನು ಶೇರ್ ಮಾಡಲು ಅವಕಾಶ ಮಾಡಿಕೊಡುತ್ತದೆ. ಐಒಎಸ್ ಮತ್ತು ಆಯಂಡ್ರಾಯ್ಡ್ ಡಿವೈಸ್ ಗಳಿಗೆ ಈ ಆಯಪ್ ಲಭ್ಯವಿದೆ.

 

Vishwa News 24

Recent Posts

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

6 minutes ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

22 minutes ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

36 minutes ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

46 minutes ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

58 minutes ago

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…

1 hour ago