Featured

ಭೂ ಕುಸಿತ ಪರಿಣಾಮ – ಜು.26ರಿಂದ ಆ.31ರವರೆಗೆ ವಾರದಲ್ಲಿ 3 ದಿನ ಮಂಗಳೂರು-ಬೆಂಗಳೂರು ಮಧ್ಯೆ ವಿಶೇಷ ರಾತ್ರಿ ರೈಲು ಸಂಚಾರ – Vishwanews24

ಜು.26ರಿಂದ ಆ.31ರವರೆಗೆ ವಾರದಲ್ಲಿ 3 ದಿನ ಮಂಗಳೂರು-ಬೆಂಗಳೂರು ಮಧ್ಯೆ ವಿಶೇಷ ರಾತ್ರಿ ರೈಲು ಸಂಚಾರ

ಮಂಗಳೂರು: ಮಂಗಳೂರು- ಬೆಂಗಳೂರು ಹೆದ್ದಾರಿ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ರೈಲು ಸಂಚಾರಕ್ಕೆ ಹೆಚ್ಚಿನ ಬೇಡಿಕೆ ಬಂದಿದ್ದು, ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಅನುಕೂಲವಾಗುವಂತೆ ಮಂಗಳೂರು ಸೆಂಟ್ರಲ್‌ ಮತ್ತು ಬೆಂಗಳೂರು ಸಿಟಿ ಜಂಕ್ಷನ್‌ ನಡುವೆ ಮೈಸೂರು ಮಾರ್ಗದಲ್ಲಿ ಜು. 26ರಿಂದ ಆ.31ರ ತನಕ ವಾರದಲ್ಲಿ ಮೂರು ದಿನ ವಿಶೇಷ ರಾತ್ರಿ ರೈಲು ಸೇವೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ನಿರಂತರ ಮಳೆ ಮತ್ತು ಭೂ ಕುಸಿತ ಪರಿಣಾಮ ರಸ್ತೆ ಸಂಪರ್ಕ ಮಾರ್ಗ ಸಮಸ್ಯೆಯಾಗಿರುವುದರಿಂದ ಮಂಗಳೂರು-ಬೆಂಗಳೂರು ನಡುವೆ ದಿನಂಪ್ರತಿ ಹೆಚ್ಚುವರಿ ರೈಲು ಒದಗಿಸುವಂತೆ ಪಶ್ಚಿಮ ಕರಾವಳಿ ರೈಲು ಯಾತ್ರಾ ಅಭಿವೃದ್ಧಿ ಸಮಿತಿ ಮಾಡಿದ ಮನವಿ ಮೇರೆಗೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ರೈಲ್ವೆ ಸಚಿವರನ್ನು ಭೇಟಿಯಾಗಿ ಹೆಚ್ಚುವರಿ ರೈಲು ಓಡಿಸಲು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ರೈಲ್ವೆ ಮಂಡಳಿ ಹೆಚ್ಚುವರಿ ವಿಶೇಷ ರೈಲು ಓಡಿಸಲು ಅನುಮೋದನೆ ನೀಡಿದೆ.

ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಡಲಿರುವ ಹೊಸ ರೈಲು, ಕೆಂಗೇರಿ 8.49, ರಾಮನಗರ 9.13, ಚನ್ನರಾಯಪಟ್ಟಣ 9.24, ಮಂಡ್ಯ 9.54, ಮೈಸೂರು ಜಂಕ್ಷನ್‌ 11, ಕೃಷ್ಣರಾಜನಗರ 11.49, ಹೊಳೆನರಸೀಪುರ ಮಧ್ಯರಾತ್ರಿ 12.43, ಹಾಸನ 1.35, ಸಕಲೇಶಪುರ ಬೆಳಗ್ಗೆ 3.00, ಸುಬ್ರಹ್ಮಣ್ಯ ರೋಡ್‌ 6.10, ಕಬಕ ಪುತ್ತೂರು 7.00, ಬಂಟ್ವಾಳ 7.30, ಪಡೀಲ್‌ 8.25, ಮಂಗಳೂರು ಜಂಕ್ಷನ್‌ 8.13, ಮಂಗಳೂರು ಸೆಂಟ್ರಲ್‌ 09.05ಕ್ಕೆ ತಲುಪಲಿದೆ.

ಮಂಗಳೂರಿನಿಂದ ಸಂಜೆ 6.35ಕ್ಕೆ ಹೊರಡುವ ರೈಲು ಮಂಗಳೂರು ಜಂಕ್ಷನ್‌ 6.48, ಪಡೀಲ್‌ 7.10, ಬಂಟ್ವಾಳ 7.20, ಕಬಕ ಪುತ್ತೂರು 7.48, ಸುಬ್ರಹ್ಮಣ್ಯ ರೋಡ್‌ ರಾತ್ರಿ 8.40, ಸಕಲೇಶಪುರ 9.20, ಹಾಸನ ಮಧ್ಯರಾತ್ರಿ 12.25, ಹೊಳೆನರಸೀಪುರ 1.13, ಕೃಷ್ಣರಾಜನಗರ 2.08, ಮೈಸೂರು ಜಂಕ್ಷನ್‌ ಬೆಳಗ್ಗೆ 3.00, ಮಂಡ್ಯ 3.54, ಚನ್ನರಾಯಪಟ್ಟಣ 4.30, ರಾಮನಗರ 4.42, ಕೆಂಗೇರಿ 5.11, ಬೆಂಗಳೂರು ಸಿಟಿ ಜಂಕ್ಷನ್‌ ಬೆಳಗ್ಗೆ 6.15ಕ್ಕೆ ತಲುಪಲಿದೆ.

ಕಣ್ಣೂರು-ಬೆಂಗಳೂರು ರೈಲಿಗೆ ಹೆಚ್ಚುವರಿ ಕೋಚ್‌ ಬೇಡಿಕೆ: ಕಣ್ಣೂರು-ಬೆಂಗಳೂರು ರಾತ್ರಿ ರೈಲು ಪ್ರತಿದಿನ ಭರ್ತಿಯಾಗಿ ಸಂಚರಿಸುತ್ತಿದೆ. ಈ ಮಾರ್ಗದಲ್ಲಿ ಸಂಚರಿಸುವ ರೈಲಿಗೆ ಹೆಚ್ಚುವರಿ ಕೋಚ್‌ ಅಳವಡಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಬೇಡಿಕೆಯನ್ನು ರೈಲ್ವೆ ಹೋರಾಟಗಾರು ವ್ಯಕ್ತಪಡಿಸಿದ್ದಾರೆ.

ಯಾವ ದಿನ ಸಂಚಾರ?
ಮಂಗಳೂರಿನಿಂದ ಬೆಂಗಳೂರು ನಗರಕ್ಕೆ ಜು.27ರಿಂದ ಆ.31ರ ತನಕ ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ 06548 ನಂಬರ್‌ನ ರೈಲು ಸಂಚರಿಸಲಿದೆ. ಬೆಂಗಳೂರಿನಿಂದ ಮಂಗಳೂರಿಗೆ ಜು.26ರಿಂದ ಆ.30ರ ತನಕ ಪ್ರತಿ ಭಾನುವಾರ, ಮಂಗಳವಾರ ಮತ್ತು ಗುರುವಾರ 06547 ನಂಬರ್‌ನ ರೈಲು ಸಂಚರಿಸಲಿದೆ. ಬೆಂಗಳೂರಿನಿಂದ ಪ್ರತಿ ಶುಕ್ರವಾರ ಮತ್ತು ಮಂಗಳೂರಿನಿಂದ  ಪ್ರತಿ ಶನಿವಾರ ಈ ವಿಶೇಷ ರೈಲು ಸಂಚಾರ ಇರುವುದಿಲ್ಲ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago