Featured

ಭೂ ಕುಸಿತ ಪರಿಣಾಮ – ಜು.26ರಿಂದ ಆ.31ರವರೆಗೆ ವಾರದಲ್ಲಿ 3 ದಿನ ಮಂಗಳೂರು-ಬೆಂಗಳೂರು ಮಧ್ಯೆ ವಿಶೇಷ ರಾತ್ರಿ ರೈಲು ಸಂಚಾರ – Vishwanews24

ಜು.26ರಿಂದ ಆ.31ರವರೆಗೆ ವಾರದಲ್ಲಿ 3 ದಿನ ಮಂಗಳೂರು-ಬೆಂಗಳೂರು ಮಧ್ಯೆ ವಿಶೇಷ ರಾತ್ರಿ ರೈಲು ಸಂಚಾರ

ಮಂಗಳೂರು: ಮಂಗಳೂರು- ಬೆಂಗಳೂರು ಹೆದ್ದಾರಿ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ರೈಲು ಸಂಚಾರಕ್ಕೆ ಹೆಚ್ಚಿನ ಬೇಡಿಕೆ ಬಂದಿದ್ದು, ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಅನುಕೂಲವಾಗುವಂತೆ ಮಂಗಳೂರು ಸೆಂಟ್ರಲ್‌ ಮತ್ತು ಬೆಂಗಳೂರು ಸಿಟಿ ಜಂಕ್ಷನ್‌ ನಡುವೆ ಮೈಸೂರು ಮಾರ್ಗದಲ್ಲಿ ಜು. 26ರಿಂದ ಆ.31ರ ತನಕ ವಾರದಲ್ಲಿ ಮೂರು ದಿನ ವಿಶೇಷ ರಾತ್ರಿ ರೈಲು ಸೇವೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ನಿರಂತರ ಮಳೆ ಮತ್ತು ಭೂ ಕುಸಿತ ಪರಿಣಾಮ ರಸ್ತೆ ಸಂಪರ್ಕ ಮಾರ್ಗ ಸಮಸ್ಯೆಯಾಗಿರುವುದರಿಂದ ಮಂಗಳೂರು-ಬೆಂಗಳೂರು ನಡುವೆ ದಿನಂಪ್ರತಿ ಹೆಚ್ಚುವರಿ ರೈಲು ಒದಗಿಸುವಂತೆ ಪಶ್ಚಿಮ ಕರಾವಳಿ ರೈಲು ಯಾತ್ರಾ ಅಭಿವೃದ್ಧಿ ಸಮಿತಿ ಮಾಡಿದ ಮನವಿ ಮೇರೆಗೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ರೈಲ್ವೆ ಸಚಿವರನ್ನು ಭೇಟಿಯಾಗಿ ಹೆಚ್ಚುವರಿ ರೈಲು ಓಡಿಸಲು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ರೈಲ್ವೆ ಮಂಡಳಿ ಹೆಚ್ಚುವರಿ ವಿಶೇಷ ರೈಲು ಓಡಿಸಲು ಅನುಮೋದನೆ ನೀಡಿದೆ.

ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಡಲಿರುವ ಹೊಸ ರೈಲು, ಕೆಂಗೇರಿ 8.49, ರಾಮನಗರ 9.13, ಚನ್ನರಾಯಪಟ್ಟಣ 9.24, ಮಂಡ್ಯ 9.54, ಮೈಸೂರು ಜಂಕ್ಷನ್‌ 11, ಕೃಷ್ಣರಾಜನಗರ 11.49, ಹೊಳೆನರಸೀಪುರ ಮಧ್ಯರಾತ್ರಿ 12.43, ಹಾಸನ 1.35, ಸಕಲೇಶಪುರ ಬೆಳಗ್ಗೆ 3.00, ಸುಬ್ರಹ್ಮಣ್ಯ ರೋಡ್‌ 6.10, ಕಬಕ ಪುತ್ತೂರು 7.00, ಬಂಟ್ವಾಳ 7.30, ಪಡೀಲ್‌ 8.25, ಮಂಗಳೂರು ಜಂಕ್ಷನ್‌ 8.13, ಮಂಗಳೂರು ಸೆಂಟ್ರಲ್‌ 09.05ಕ್ಕೆ ತಲುಪಲಿದೆ.

ಮಂಗಳೂರಿನಿಂದ ಸಂಜೆ 6.35ಕ್ಕೆ ಹೊರಡುವ ರೈಲು ಮಂಗಳೂರು ಜಂಕ್ಷನ್‌ 6.48, ಪಡೀಲ್‌ 7.10, ಬಂಟ್ವಾಳ 7.20, ಕಬಕ ಪುತ್ತೂರು 7.48, ಸುಬ್ರಹ್ಮಣ್ಯ ರೋಡ್‌ ರಾತ್ರಿ 8.40, ಸಕಲೇಶಪುರ 9.20, ಹಾಸನ ಮಧ್ಯರಾತ್ರಿ 12.25, ಹೊಳೆನರಸೀಪುರ 1.13, ಕೃಷ್ಣರಾಜನಗರ 2.08, ಮೈಸೂರು ಜಂಕ್ಷನ್‌ ಬೆಳಗ್ಗೆ 3.00, ಮಂಡ್ಯ 3.54, ಚನ್ನರಾಯಪಟ್ಟಣ 4.30, ರಾಮನಗರ 4.42, ಕೆಂಗೇರಿ 5.11, ಬೆಂಗಳೂರು ಸಿಟಿ ಜಂಕ್ಷನ್‌ ಬೆಳಗ್ಗೆ 6.15ಕ್ಕೆ ತಲುಪಲಿದೆ.

ಕಣ್ಣೂರು-ಬೆಂಗಳೂರು ರೈಲಿಗೆ ಹೆಚ್ಚುವರಿ ಕೋಚ್‌ ಬೇಡಿಕೆ: ಕಣ್ಣೂರು-ಬೆಂಗಳೂರು ರಾತ್ರಿ ರೈಲು ಪ್ರತಿದಿನ ಭರ್ತಿಯಾಗಿ ಸಂಚರಿಸುತ್ತಿದೆ. ಈ ಮಾರ್ಗದಲ್ಲಿ ಸಂಚರಿಸುವ ರೈಲಿಗೆ ಹೆಚ್ಚುವರಿ ಕೋಚ್‌ ಅಳವಡಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಬೇಡಿಕೆಯನ್ನು ರೈಲ್ವೆ ಹೋರಾಟಗಾರು ವ್ಯಕ್ತಪಡಿಸಿದ್ದಾರೆ.

ಯಾವ ದಿನ ಸಂಚಾರ?
ಮಂಗಳೂರಿನಿಂದ ಬೆಂಗಳೂರು ನಗರಕ್ಕೆ ಜು.27ರಿಂದ ಆ.31ರ ತನಕ ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ 06548 ನಂಬರ್‌ನ ರೈಲು ಸಂಚರಿಸಲಿದೆ. ಬೆಂಗಳೂರಿನಿಂದ ಮಂಗಳೂರಿಗೆ ಜು.26ರಿಂದ ಆ.30ರ ತನಕ ಪ್ರತಿ ಭಾನುವಾರ, ಮಂಗಳವಾರ ಮತ್ತು ಗುರುವಾರ 06547 ನಂಬರ್‌ನ ರೈಲು ಸಂಚರಿಸಲಿದೆ. ಬೆಂಗಳೂರಿನಿಂದ ಪ್ರತಿ ಶುಕ್ರವಾರ ಮತ್ತು ಮಂಗಳೂರಿನಿಂದ  ಪ್ರತಿ ಶನಿವಾರ ಈ ವಿಶೇಷ ರೈಲು ಸಂಚಾರ ಇರುವುದಿಲ್ಲ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago