ಭೂ ಸುಧಾರಣಾ ಕಾನೂನು ಜಾರಿಯಾಗಿ ಪ್ರಸ್ತುತ ೫೦ ವರ್ಷಗಳಾದ ಪ್ರಯುಕ್ತ ಉಡುಪಿ ಜಿಲ್ಲಾ ಕಾಂಗ್ರೆಸ್ ತಾ. ೧೯.೦೩.೨೦೨೨ರಂದು ಹಿರಿಯಡ್ಕ ಗಾಂಧಿ ಮೈದಾನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತುರ್ತು ಸಭೆಯಲ್ಲಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಕರೆ ನೀಡಿದರು.
ಮಾಜಿ ಸಚಿವರಾದ ಶ್ರೀ ವಿನಯ ಕುಮಾರ್ ಸೊರಕೆಯವರು ಮಾತನಾಡಿ ಉಳುವವನೇ ಹೊಲದೊಡೆಯನಾಗಬೇಕೆಂಬ ಉದ್ದೇಶದಿಂದ ೫೦ ವರ್ಷಗಳ ಹಿಂದೆ ತಂದ ಭೂ ಮಸೂದೆ ಕಾಯ್ದೆ ರಾಜ್ಯದಲ್ಲಿ ಕ್ರಾಂತಿಗೆ ಕಾರಣವಾಯ್ತು. ಈ ಮಸೂದೆಯಿಂದ ಹಲವಾರು ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಣೆಗೊಂಡಿರುವುದನ್ನು ಮರೆಯಲಾಗದು. ಈ ಹಿನ್ನಲೆಯಲ್ಲಿ ಮಸೂದೆಯ ಫಲಾನುಭವಿಗಳು ಇಂದಿಗೂ ಕೃಷಿಯನ್ನು ನೆಚ್ಚಿಕೊಂಡು ಘೋಷಣೆಯನ್ನು ಸಾಕಾರಗೊಳಿಸಿದ ಕುಟುಂಬವನ್ನು ಗುರುತಿಸುವ ಕಾರ್ಯಕ್ರಮ ಇದೆ ಎಂದರು.
ಸಭೆಯಲ್ಲಿ ಮುಖಂಡರಾದ ದಿನೇಶ್ ಪುತ್ರನ್, ಪ್ರಖ್ಯಾತ್ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಶಶಿಧರ ಶೆಟ್ಟಿ ಎಲ್ಲೂರು, ಕೃಷ್ಣಮೂರ್ತಿ ಕಾರ್ಕಳ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಅಲೆವೂರು ಹರೀಶ್ ಕಿಣಿ, ಜ್ಯೋತಿ ಹೆಬ್ಬಾರ್, ಯತೀಶ್ ಕರ್ಕೇರಾ, ಕೀರ್ತಿ ಶೆಟ್ಟಿ, ಪ್ರಶಾಂತ್ ಜತ್ತನ್ನ, ಬಾಲಕೃಷ್ಣ ಪೂಜಾರಿ, ಕಿಶೋರ್ ಎರ್ಮಾಳ್, ಸೌರಭ್ ಬಲ್ಲಾಲ್, ರಮೇಶ್ ಕಾಂಚನ್, ದಿನಕರ್ ಹೇರೂರು, ದೀಪಕ್ ಕೋಟ್ಯಾನ್, ಉದ್ಯಾವರ ನಾಗೇಶ್ ಕುಮಾರ್, ಉಪೇಂದ್ರ ಮೆಂಡನ್, ದೀವಾ ನಂಬಿಯಾರ್, ಸತೀಶ್ ಕುಮಾರ್ ಮಂಚಿ, ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.
ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಅವರು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಕೆ. ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…