ಭೂ ಸಂತ್ರಸ್ತರ ಜತೆ ಯುಪಿಸಿಎಲ್ ಅದಾನಿ ಮಾತುಕತೆ ಸಫಲ-ಒಂದು ತಿಂಗಳೊಳಗೆ ಸಮಸ್ಯೆ ಪರಿಹಾರ ಯತ್ನ-ಕಿಶೋರ್ ಆಳ್ವಾ
ಕಾಪು: ಯುಪಿಸಿಎಲ್ ಅದಾನಿ ಎಲ್ಲೂರು ಭಾಗದದಲ್ಲಿ ಎರಡನೇ ಹಂತದ ಪ್ರಾಜೆಕ್ಟ್ ನಿರ್ಮಾಣಕ್ಕೆ ಜಾಗ ಒತ್ತುವರಿ ಮಾಡಿಕೊಂಡಿದ್ದ ಭೂ ಸಂತ್ರಸ್ತರಿಗೆ ಉದ್ಯೋಗದ ಭರವಸೆ ಮತ್ತು ಉದ್ಯೋಗ ಯಾ ಪರಿಹಾರಧನನೀಡುವ ಕುರಿತಾದ ಭರವಸೆಗೆ ಐದು ವರ್ಷ ಕಳೆದುಹೋಗಿರುವ ಪರಿಣಾಮ ಅಲ್ಲಿನ ಸಂತ್ರಸ್ತರು ಪತ್ರಿಕಾಗೋಷ್ಠಿ ನಡೆಸಿದ ಒಂದು ವಾರದೊಳಗೆ ಅದಾನಿ ಸಂಸ್ಥೆ ಭೂ ಸಂತ್ರಸ್ತರ ಜತೆ ಮಾತುಕತೆ ನಡೆಸಬೇಕು ತಪ್ಪಿದ್ದಲ್ಲಿ ಜನವರಿ 29 ರಂದು ಅದಾನಿ ಯುಪಿಸಿಎಲ್ ಮುಖ್ಯದ್ವಾರದ ಎದುರು ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರು.
ಈ ಪೈಕಿ ಕಳೆದ ಎರಡು ದಿನಗಳ ಹಿಂದೆ ಅದಾನಿ ಯುಪಿಸಿಎಲ್ ನ ಜಂಟಿ ನಿರ್ದೇಶಕ ಕಿಶೋರ್ ಅಳ್ವಾ,ಹಾಗೂ ರವಿ ಭೂ ಸಂತ್ರಸ್ತರ ಕಾಲೋನಿಗೆ ತೆರಳಿದ ಮಾತುಕತೆ ನಡೆಸಿದ್ದಾರೆ.
ಮುಂದಿನ ಒಂದು ತಿಂಗಳೊಳಗಾಗಿ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿ ಭೂ ಸಂತ್ರಸ್ತರಿಗೆ ನ್ಯಾಯ ದೊರಕಿಸುವ ಬಗ್ಗೆ ಭರವಸೆ ನೀಡಿದ್ದಾರೆ ಮತ್ತು ಫೆಬ್ರವರಿ ತಿಂಗಳಲ್ಲಿ ಎರಡನೇ ಸುತ್ತಿನ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಇದರಿಂದಾಗಿ ಭೂಸಂತ್ರಸ್ತರು ಜನವರಿ29 ರಂದು ನಡೆಯುವ ಪ್ರತಿಭಟನೆ ಹಿಂಪಡೆದಿರುವುದಾಗಿ ಸಂತ್ರಸ್ತರೊಬ್ಬರಾದ ನಿತೇಶ್ ವಿಶ್ವನ್ಯೂಸ್24 ಗೆ ತಿಳಿಸಿದ್ದಾರೆ.
ವರದಿ: ಪುರುಷೋತ್ತಮ ಸಾಲಿಯಾನ್
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…