Featured

ಭ್ರಷ್ಟಚಾರದ ವಿರುದ್ಧ ಹೋರಾಡಲು ನಾನು ಶಾಸಕನಾಗಬೇಕಿದೆ , ನನ್ನನ್ನು ಈ ಚುನಾವಣೆಯಲ್ಲಿ ಗೆಲ್ಲಿಸಿ : ವಾಟಾಳ್​​ ನಾಗರಾಜ್​​ -Vishwanews24

ಬೆಂಗಳೂರು:”ಕಾಂಗ್ರೆಸ್​​-ಜೆಡಿಎಸ್​​ನಿಂದ ಬಿಜೆಪಿಗೆ ಸೇರಿದ ಪಕ್ಷಾಂತರಿಗಳನ್ನು ಸೋಲಿಸಬೇಕೆಂದು ಕನ್ನಡಪರ ಹೋರಾಟಗಾರ ವಾಟಾಳ್​​ ನಾಗರಾಜ್​​ ಆಗ್ರಹಿಸಿದ್ದಾರೆ.

ಕರ್ನಾಟಕದ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಪಕ್ಷಾಂತರಿಗಳಿಗೆ ಮತ ಹಾಕಬಾರದು. ಈ ಬಾರಿ ಉಪಚುನಾವಣೆಯಲ್ಲಿ ಸೋಲಿಸಿ ಬುದ್ದಿ ಕಲಿಸಬೇಕೆಂದು” ಜನತೆಗೆ ಮನವಿ ಮಾಡಿದರು.

ಭಾನುವಾರ  ಮೈಸೂರಿನಲ್ಲಿ ವಾಟಾಳ್​​ ನಾಗರಾಜ್​​ ನೇತೃತ್ವದಲ್ಲಿ ಕಾಂಗ್ರೆಸ್​​ ಮತ್ತು ಜೆಡಿಎಸ್​​​​ ಅನರ್ಹ ಶಾಸಕರ ವಿರುದ್ಧ ವಿನೂತನ ಪ್ರತಿಭಟನೆ ಹಮ್ಮಿಕೊಂಡಿದ್ದರು. ಇಲ್ಲಿನ ರೈಲು ನಿಲ್ದಾಣದ ಮುಂಭಾಗ ಹಮ್ಮಿಕೊಂಡಿದ್ದ ವಿನೂತನ ಪ್ರತಿಭಟನೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್​​ ನಾಗರಾಜ್​​​ ಪಕ್ಷಾಂತರಿಗಳನ್ನು ಸೋಲಿಸುವಂತೆ ಕರೆ ನೀಡಿದರು. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗುವ ಪಕ್ಷಾಂತರಿಗಳಿಂದ ಪ್ರಜಾಪ್ರಭುತ್ವ ಹಾಳಾಗಿದೆ. ತಮ್ಮ ಸ್ವಹಿತಾಸಕ್ತಿಗಾಗಿ ಹೀಗೆ ಪಕ್ಷಾಂತರ ಮಾಡುತ್ತಿದ್ದಾರೆ. ಇದೊಂದು ರೀತಿ ಥೇಟ್​​ ದರೋಡೆ ಮಾಡಿದಾಗೇ. ಸುಪ್ರೀಂಕೋರ್ಟ್​​ ಅನರ್ಹ ಶಾಸಕರು ಚುನಾವಣೆಗೆ ನಿಲ್ಲಬಹುದು ಎಂದು ತೀರ್ಪು ನೀಡಿದೆ. ಮತ್ತೊಮ್ಮೆ ತನ್ನ ತೀರ್ಪು ಮರು ಪರಿಶೀಲಿಸುವಂತೆ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಎಂದರು.

ಅನರ್ಹ ಶಾಸಕರನ್ನು ಜನ ತಿರಸ್ಕರಿಸಬೇಕು. ಇಂತಹ ರಾಜಕಾರಣಿಗಳು ಸಂಸದೀಯ ವ್ಯವಸ್ಥೆಗೆ ಕಪ್ಪುಚುಕ್ಕೆ ತರುತ್ತಿದ್ದಾರೆ. ಹಾಗಾಗಿ ಈ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಸೋಲಿಸುವ ಮುಖೇನ ಬುದ್ದಿ ಕಲಿಸಬೇಕೆಂದು ಒತ್ತಾಯಿಸಿದರು. ಇಂತಹ ಅಪ್ರಾಮಾಣಿಕ ರಾಜಕಾರಣಿಗಳ ವಿರುದ್ಧ ಹೋರಾಟಕ್ಕೆ ನಾನು ಸದಾ ಸಿದ್ದ ಎಂದು ಹೇಳಿದರು. ಭ್ರಷ್ಟಚಾರದ ವಿರುದ್ಧ ಹೋರಾಡಲು ನಾನು ಶಾಸಕನಾಗಬೇಕಿದೆ. ಹಾಗಾಗಿ ಶಿವಾಜಿನಗರ ಮತ್ತು ಮಹಾಲಕ್ಷ್ಮೀ ಲೇಔಟ್​​ನಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಎಂದರೆ ಯಡವಟ್ಟು ಎಂಬ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನನ್ನನ್ನು ಈ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ವಿನಂತಿಸಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

7 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

7 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

7 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

8 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

8 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

10 hours ago