ಹೊಸದಿಲ್ಲಿ,: ಪ್ರಧಾನಿಗಳ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು ಮಾಡುತ್ತಿದ್ದ ರಾಹುಲ್ ಗಾಂಧಿ ಇದೀಗ ಹೊಸ ಆರೋಪವೊಂದನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಭ್ರಷ್ಟ ಶ್ರೀಮಂತ ಗೆಳೆಯರಿಗೆ ಸಹಾಯ ಮಾಡಲೆಂದು ನೋಟು ಅಮಾನ್ಯೀಕರಣ ಮಾಡಿದ್ದರು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಪ್ಪುಹಣದ ವಿರುದ್ಧ ಹೋರಾಡಲು ನೋಟು ರದ್ಧತಿ ಮಾಡುತ್ತಿರುವುದಾಗಿ ಹೇಳಿದ್ದರು. ಆದರೆ ಆರ್ಬಿಐ ಪ್ರಕಾರ ಬಹುತೇಕ ಎಲ್ಲಾ ನೋಟುಗಳು ಆರ್ಬಿಐಗೆ ವಾಪಸ್ ಬಂದಿವೆ. ಹಾಗಿದ್ದರೆ ಕಪ್ಪುಹಣ ಎಲ್ಲಿ ಹೋಯಿತು ಎಂದು ಅವರು ಪ್ರಶ್ನಿಸಿದ್ದಾರೆ. ಆರ್ಬಿಐ ಇತ್ತೀಚೆಗಷ್ಟೆ ಬಿಡುಗಡೆ ಮಾಡಿದ ವರದಿಯಲ್ಲಿ 99.60% ನೋಟುಗಳು ವಾಪಸ್ ಬಂದಿದ್ದಾಗಿ ವರದಿ ನೀಡಿದೆ. ಅಮಿತ್ ಶಾ ಬ್ಯಾಂಕಿನಲ್ಲಿ 700 ಕೋಟಿ ಬದಲು ನೋಟು ರದ್ಧತಿ ಭಾರತದ ಅತಿದೊಡ್ಡ ಹಗರಣ ಎಂದ ರಾಹುಲ್, ಮೋದಿ ಅವರ ಕೆಲವು ಶ್ರೀಮಂತ ಸ್ನೇಹಿತರ ಕಪ್ಪು ಹಣವನ್ನು ಬಿಳಿ ಮಾಡಲು ನೋಟು ರದ್ಧತಿ ಮಾಡಲಾಗಿತ್ತು. ನೋಟು ಅಮಾನ್ಯೀಕರಣ ದೇಶದ ಅತಿ ದೊಡ್ಡ ಹಗರಣ ಎಂದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…