ಹೊಸದಿಲ್ಲಿ,: ಪ್ರಧಾನಿಗಳ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು ಮಾಡುತ್ತಿದ್ದ ರಾಹುಲ್ ಗಾಂಧಿ ಇದೀಗ ಹೊಸ ಆರೋಪವೊಂದನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಭ್ರಷ್ಟ ಶ್ರೀಮಂತ ಗೆಳೆಯರಿಗೆ ಸಹಾಯ ಮಾಡಲೆಂದು ನೋಟು ಅಮಾನ್ಯೀಕರಣ ಮಾಡಿದ್ದರು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಪ್ಪುಹಣದ ವಿರುದ್ಧ ಹೋರಾಡಲು ನೋಟು ರದ್ಧತಿ ಮಾಡುತ್ತಿರುವುದಾಗಿ ಹೇಳಿದ್ದರು. ಆದರೆ ಆರ್ಬಿಐ ಪ್ರಕಾರ ಬಹುತೇಕ ಎಲ್ಲಾ ನೋಟುಗಳು ಆರ್ಬಿಐಗೆ ವಾಪಸ್ ಬಂದಿವೆ. ಹಾಗಿದ್ದರೆ ಕಪ್ಪುಹಣ ಎಲ್ಲಿ ಹೋಯಿತು ಎಂದು ಅವರು ಪ್ರಶ್ನಿಸಿದ್ದಾರೆ. ಆರ್ಬಿಐ ಇತ್ತೀಚೆಗಷ್ಟೆ ಬಿಡುಗಡೆ ಮಾಡಿದ ವರದಿಯಲ್ಲಿ 99.60% ನೋಟುಗಳು ವಾಪಸ್ ಬಂದಿದ್ದಾಗಿ ವರದಿ ನೀಡಿದೆ. ಅಮಿತ್ ಶಾ ಬ್ಯಾಂಕಿನಲ್ಲಿ 700 ಕೋಟಿ ಬದಲು ನೋಟು ರದ್ಧತಿ ಭಾರತದ ಅತಿದೊಡ್ಡ ಹಗರಣ ಎಂದ ರಾಹುಲ್, ಮೋದಿ ಅವರ ಕೆಲವು ಶ್ರೀಮಂತ ಸ್ನೇಹಿತರ ಕಪ್ಪು ಹಣವನ್ನು ಬಿಳಿ ಮಾಡಲು ನೋಟು ರದ್ಧತಿ ಮಾಡಲಾಗಿತ್ತು. ನೋಟು ಅಮಾನ್ಯೀಕರಣ ದೇಶದ ಅತಿ ದೊಡ್ಡ ಹಗರಣ ಎಂದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…