ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಕಳೆದ 4 ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಸವರಾಜ ಜಿ. ಹುಬ್ಬಳ್ಳಿ ಯವರ ಕಾರ್ಯ ವೈಖರಿಯ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಅಧಿಕಾರಿಯ ವಿರುದ್ಧ ತನಿಖೆ ನಡೆಸಿ ಶಿಸ್ತು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಅಧೀನ ವೈದ್ಯರು, ವೈದ್ಯಾಧಿಕಾರಿಗಳು, ಶುಶ್ರೂಷಕರು ಹಾಗೂ ಸಿಬ್ಬಂದಿಗಳ ಸೇವಾ ವಿಷಯದಲ್ಲಿ ವ್ಯಾಪಕ ಭ್ರಷ್ಟಾಚಾರವೆಸಗುತ್ತಿರುವ ಬಗ್ಗೆ ಮೌಖಿಕ ದೂರುಗಳು ಬರುತ್ತಿವೆ. ಬಿಲ್ ಪಾವತಿ, ಟೆಂಡರ್ ಮತ್ತಿತರ ವಿಷಯಗಳಲ್ಲೂ ನಿಯಮ ಮೀರಿ ಭ್ರಷ್ಟಾಚಾರ ಎಸಗುತ್ತಿರುವ ಬಗ್ಗೆ ಆರೋಪಗಳಿವೆ.
ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರಾದ ಡಾ. ಪಿ. ವಿ. ಭಂಡಾರಿ ರವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಭ್ರಷ್ಟಾಚಾರಗಳ ಬಗ್ಗೆ ಗಮನಕ್ಕೆ ತಂದು, ಸದ್ರಿ ಭ್ರಷ್ಟ ಅಧಿಕಾರಿಯ ಬಗ್ಗೆ ತುರ್ತಾಗಿ ಕ್ರಮ ವಹಿಸುವಂತೆ ಕೋರಿರುತ್ತಾರೆ.
ಸಿಬ್ಬಂದಿಗಳ ವರ್ಗಾವಣೆಗೆ ಅರ್ಹರ ಪಟ್ಟಿ ತಯಾರಿಸುವಲ್ಲೂ ಭ್ರಷ್ಟಾಚಾರವೆಸಗಿರುವ ಬಗ್ಗೆ ಆರೋಪಗಳಿವೆ. ಸ್ಥಳೀಯವಾಗಿ ವಿಚಾರಿಸಲಾಗಿ ಮೇಲ್ನೋಟಕ್ಕೆ ಇವರ ಮೇಲಿರುವ ಆರೋಪಗಳು ಸತ್ಯವಾಗಿರುವಂತೆ ಕಂಡು ಬರುತ್ತಿದೆ.
ಆರೋಗ್ಯ ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಉತ್ತಮ ಸೇವೆಗೆ ಹೆಸರು ಮಾಡಿದ ಉಡುಪಿಯಂತಹ ಮುಂದುವರೆದ ಜಿಲ್ಲೆಯಲ್ಲಿ ಈ ರೀತಿಯ ಕಾರ್ಯ ವೈಖರಿ ಒಪ್ಪಿಕೊಳ್ಳಲು ಸಾಧ್ಯವಿರುವುದಿಲ್ಲ. ತಕ್ಷಣ ಈ ಅಧಿಕಾರಿಯ ವರ್ಗಾವಣೆಗೆ ಕ್ರಮ ಕೈಗೊಂಡು, ಇವರ ಕರ್ತವ್ಯದ ಅವಧಿಯಲ್ಲಿ ಕೈಗೊಂಡ ತೀರ್ಮಾನಗಳು ಮತ್ತು ವಿಲೇಗೊಳಿಸಿದ ಕಡತಗಳ ಬಗ್ಗೆ ತನಿಖೆ ನಡೆಸಿ, ಸೂಕ್ತ ಶಿಸ್ತು ಕ್ರಮಕೈಗೊಳ್ಳುವಂತೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…