ನವದೆಹಲಿ : ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ 22 ತೆರಿಗೆ ಅಧಿಕಾರಿಗಳಿಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ನೀಡಿದ್ದು, 22 ಹಿರಿಯ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲಾಗಿದೆ.
ಭ್ರಷ್ಟಾಚಾರ, ಇತರೆ ಗಂಭೀರ ಅರೋಪಗಳು ಹಾಗೂ ಸಿಬಿಐ ತನಿಖೆ ಎದುರಿಸುತ್ತಿರುವ ಸೂಪರಿಟೆಂಡೆಂಟ್ ದರ್ಜೆಯ 22 ಹಿರಿಯ ಅಧಿಕಾರಿಗಳಿಗೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಸೀಮಾ ಸುಂಕ ಮಂಡಳಿ ಕಡ್ಡಾಯ ನಿವೃತ್ತಿ ನೀಡಿದೆ. ಈ ಮೊದಲು ಹಣಕಾಸು ಸಚಿವಾಲಯ ಆದಾಯ ತೆರಿಗೆ ಇಲಾಖೆಯ 12 ಅಧಿಕಾರಿಗಳು ಸೇರಿದಂತೆ ಒಟ್ಟು 27 ಭಾರತೀಯ ಸೇವೆಯ ಅಧಿಕಾರಿಗಳಿಗೆ ಕಡ್ಡಾಯ ನೀಡಿತ್ತು.
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿಗಳು ಉದ್ಯಮಿಗಳಿಗೆ ನೋಟಿಸ್ ಅಥವಾ ಸಮನ್ಸ್ ನೀಡಿ ಅವರಿಂದ ಹಣ ವಸೂಲಿ ಮಾಡುವುದನ್ನು ತಡೆಯಲು ಕೇಂದ್ರ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ ಎನ್ನಲಾಗಿದೆ.
ಈ ಮೂಲಕ ಭ್ರಷ್ಟಾಚಾರ ಹಾಗೂ ಇತರ ಗಂಭೀರ ಆರೋಪಗಳನ್ನು ಮಾಡಿದ ಅಧಿಕಾರಿಗಳಿಗೆ ಕೇವಲ ನೋಟಿಸ್ ಹಾಗೂ ಸಮನ್ಸ್ ನೀಡುವ ಸಂಸ್ಕೃತಿಗೆ ಸರ್ಕಾರ ತಿಲಾಂಜಲಿ ಹಾಡಿದ್ದು, ಭ್ರಷ್ಟಾಚಾರದಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…