ನವದೆಹಲಿ : ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ 22 ತೆರಿಗೆ ಅಧಿಕಾರಿಗಳಿಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ನೀಡಿದ್ದು, 22 ಹಿರಿಯ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲಾಗಿದೆ.
ಭ್ರಷ್ಟಾಚಾರ, ಇತರೆ ಗಂಭೀರ ಅರೋಪಗಳು ಹಾಗೂ ಸಿಬಿಐ ತನಿಖೆ ಎದುರಿಸುತ್ತಿರುವ ಸೂಪರಿಟೆಂಡೆಂಟ್ ದರ್ಜೆಯ 22 ಹಿರಿಯ ಅಧಿಕಾರಿಗಳಿಗೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಸೀಮಾ ಸುಂಕ ಮಂಡಳಿ ಕಡ್ಡಾಯ ನಿವೃತ್ತಿ ನೀಡಿದೆ. ಈ ಮೊದಲು ಹಣಕಾಸು ಸಚಿವಾಲಯ ಆದಾಯ ತೆರಿಗೆ ಇಲಾಖೆಯ 12 ಅಧಿಕಾರಿಗಳು ಸೇರಿದಂತೆ ಒಟ್ಟು 27 ಭಾರತೀಯ ಸೇವೆಯ ಅಧಿಕಾರಿಗಳಿಗೆ ಕಡ್ಡಾಯ ನೀಡಿತ್ತು.
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿಗಳು ಉದ್ಯಮಿಗಳಿಗೆ ನೋಟಿಸ್ ಅಥವಾ ಸಮನ್ಸ್ ನೀಡಿ ಅವರಿಂದ ಹಣ ವಸೂಲಿ ಮಾಡುವುದನ್ನು ತಡೆಯಲು ಕೇಂದ್ರ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ ಎನ್ನಲಾಗಿದೆ.
ಈ ಮೂಲಕ ಭ್ರಷ್ಟಾಚಾರ ಹಾಗೂ ಇತರ ಗಂಭೀರ ಆರೋಪಗಳನ್ನು ಮಾಡಿದ ಅಧಿಕಾರಿಗಳಿಗೆ ಕೇವಲ ನೋಟಿಸ್ ಹಾಗೂ ಸಮನ್ಸ್ ನೀಡುವ ಸಂಸ್ಕೃತಿಗೆ ಸರ್ಕಾರ ತಿಲಾಂಜಲಿ ಹಾಡಿದ್ದು, ಭ್ರಷ್ಟಾಚಾರದಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…