ಬೆಂಗಳೂರು: -ವ್ಯವಸ್ಥೆಯಲ್ಲಿ ಬೇರುಬಿಟ್ಟಿರುವ ಭ್ರಷ್ಟಾಚಾರವನ್ನು ಪೂರ್ಣವಾಗಿ ಮುಕ್ತಗೊಳಿಸುವುದು ಸುಲಭವಲ್ಲ. ಅಧಿಕಾರಿ ಮತ್ತು ನೌಕರರ ವರ್ಗಾವಣೆಯಿಂದ ಭ್ರಷ್ಟಾಚಾರ ಆರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮುಖ್ಯಮಂತ್ರಿಯಾದ ಬಳಿಕ ನಗರದಲ್ಲಿರುವ ಗಾಂಧಿ ಭವನಕ್ಕೆ ಭೇಟಿ ಕೊಟ್ಟು ಮಹಾತ್ಮಗಾಂಧೀಜಿಯವರ ಪುತ್ಥಳಿಗೆ ಪುಷ್ಪ ನಮನ ಅರ್ಪಿಸಿದ ನಂತರ ಅವರು ಮಾತನಾಡಿದರು. ಒಂದು ವೇಳೆ ಭ್ರಷ್ಟಾಚಾರವನ್ನು ಪೂರ್ಣ ಪ್ರಮಾಣದಲ್ಲಿ ನಿರ್ಮೂಲನೆ ಮಾಡಲು ತಾವು ಮುಂದಾದರೆ ಮುಖ್ಯಮಂತ್ರಿ ಸ್ಥಾನದಲ್ಲಿ ತಮ್ಮನ್ನು ಇರಲು ಬಿಡದಿರುವಂತಹ ವ್ಯವಸ್ಥೆ ನಿರ್ಮಾಣವಾಗಿದೆ. ಶೃಂಗೇರಿಯ ಗುರುಗಳು ನಮ್ಮ ಮಠಕ್ಕೆ ತಾವು ಏನೂ ಮಾಡುವುದು ಬೇಡ, ಭ್ರಷ್ಟಾಚಾರ ನಿಲ್ಲಿಸಿ ಎಂದು ಹೇಳಿದರು. ಸಾಧ್ಯವಾದಷ್ಟು ಮಟ್ಟಿಗೆ ಭ್ರಷ್ಟಾಚಾರ ತಡೆಯುವ ಪ್ರಯತ್ನ ಮಾಡುವುದಾಗಿ ಹೇಳಿದ ಅವರು, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಹೊರತು ಪೂರ್ಣ ಬಹುಮತವಿಲ್ಲದೆ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಕಠಿಣ ನಿರ್ಧಾರ ಆಗುವುದಿಲ್ಲ. ಇನ್ನೆರಡು ಮೂರು ದಿನಗಳಲ್ಲಿ ಅಧಿಕಾರಿಗಳ ಸಭೆ ಕರೆದು ಆಡಳಿತವನ್ನು ಚುರುಕುಗೊಳಿಸಲಾಗುವುದು ಎಂದರು.
ಎಷ್ಟು ದಿನ ಬದುಕಿರುತ್ತೇನೆಯೋ ಎಂಬುದು ಗೊತ್ತಿಲ್ಲ. ಹಣದ ಅಗತ್ಯವಿಲ್ಲ. ಹಣ ಮಾಡುವ ಹುಚ್ಚೂ ಇಲ್ಲ. ಮಹಾತ್ಮ ಗಾಂಧೀಜಿಯವರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ಸರ್ಕಾರವನ್ನು ಮುನ್ನಡೆಸಿ ಬಡ ಕುಟುಂಬಗಳಿಗೆ ಸ್ಪಂದಿಸುವ ರೀತಿ ಆಡಳಿತ ನಡೆಸಲಾಗುವುದು ಎಂದರು. ಮಹಾತ್ಮಗಾಂಧೀಜಿ ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಸರ್ಕಾರ ನಡೆಯಲಿದೆ ಎಂದು ಹೇಳಿದರು.
ಗಾಂಧಿ ತತ್ವಗಳನ್ನು ಮರೆಯುತ್ತಿರುವ ಕೆಟ್ಟ ದಿನಗಳು, ಅಶಾಂತಿ, ಹಿಂಸೆ ಕಾಣುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಯುವ ಪೀಳಿಗೆಗೆ ಮಾನವೀಯ ಮೌಲ್ಯ ಪುನರ್ ಪ್ರತಿಷ್ಠಾಪಿಸಲು ಹಿರಿಯರ ಮಾರ್ಗದರ್ಶನ ಅಗತ್ಯ ಎಂದು ಹೇಳಿದರು. ದೇವರ ಕೃಪೆಯಿಂದ ಎರಡನೇ ಬಾರಿಗೆ ಸಮ್ಮಿಶ್ರ ಸರ್ಕಾರ ಮುನ್ನಡೆಸುವ ಜವಾಬ್ದಾರಿ ತಮ್ಮ ಮೇಲಿದೆ. ರಾಜಕೀಯ ಬದಿಗಿಟ್ಟು ರಾಜ್ಯದ ಅಭಿವೃದ್ಧಿಗೆ ಸರ್ಕಾರದೊಂದಿಗೆ ಸಹಕರಿಸಿ. ಸರ್ಕಾರ ಐದು ವರ್ಷ ಸುಭದ್ರವಾಗಿ ಉತ್ತಮ ಆಡಳಿತ ನೀಡಲಿದೆ ಎಂದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…