ರಾಜ್ಯ ನ್ಯೂಸ್

ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾದರೆ ನಾನು ಸಿಎಂ ಆಗಿರಲು ಸಾಧ್ಯವಿಲ್ಲ : ಎಚ್‍ಡಿಕೆ

ಬೆಂಗಳೂರು: -ವ್ಯವಸ್ಥೆಯಲ್ಲಿ ಬೇರುಬಿಟ್ಟಿರುವ ಭ್ರಷ್ಟಾಚಾರವನ್ನು ಪೂರ್ಣವಾಗಿ ಮುಕ್ತಗೊಳಿಸುವುದು ಸುಲಭವಲ್ಲ. ಅಧಿಕಾರಿ ಮತ್ತು ನೌಕರರ ವರ್ಗಾವಣೆಯಿಂದ ಭ್ರಷ್ಟಾಚಾರ ಆರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.  ಮುಖ್ಯಮಂತ್ರಿಯಾದ ಬಳಿಕ ನಗರದಲ್ಲಿರುವ ಗಾಂಧಿ ಭವನಕ್ಕೆ ಭೇಟಿ ಕೊಟ್ಟು ಮಹಾತ್ಮಗಾಂಧೀಜಿಯವರ ಪುತ್ಥಳಿಗೆ ಪುಷ್ಪ ನಮನ ಅರ್ಪಿಸಿದ ನಂತರ ಅವರು ಮಾತನಾಡಿದರು.   ಒಂದು ವೇಳೆ ಭ್ರಷ್ಟಾಚಾರವನ್ನು ಪೂರ್ಣ ಪ್ರಮಾಣದಲ್ಲಿ ನಿರ್ಮೂಲನೆ ಮಾಡಲು ತಾವು ಮುಂದಾದರೆ ಮುಖ್ಯಮಂತ್ರಿ ಸ್ಥಾನದಲ್ಲಿ ತಮ್ಮನ್ನು ಇರಲು ಬಿಡದಿರುವಂತಹ ವ್ಯವಸ್ಥೆ ನಿರ್ಮಾಣವಾಗಿದೆ. ಶೃಂಗೇರಿಯ ಗುರುಗಳು ನಮ್ಮ ಮಠಕ್ಕೆ ತಾವು ಏನೂ ಮಾಡುವುದು ಬೇಡ, ಭ್ರಷ್ಟಾಚಾರ ನಿಲ್ಲಿಸಿ ಎಂದು ಹೇಳಿದರು. ಸಾಧ್ಯವಾದಷ್ಟು ಮಟ್ಟಿಗೆ ಭ್ರಷ್ಟಾಚಾರ ತಡೆಯುವ ಪ್ರಯತ್ನ ಮಾಡುವುದಾಗಿ ಹೇಳಿದ ಅವರು, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಹೊರತು ಪೂರ್ಣ ಬಹುಮತವಿಲ್ಲದೆ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಕಠಿಣ ನಿರ್ಧಾರ ಆಗುವುದಿಲ್ಲ. ಇನ್ನೆರಡು ಮೂರು ದಿನಗಳಲ್ಲಿ ಅಧಿಕಾರಿಗಳ ಸಭೆ ಕರೆದು ಆಡಳಿತವನ್ನು ಚುರುಕುಗೊಳಿಸಲಾಗುವುದು ಎಂದರು.

ಎಷ್ಟು ದಿನ ಬದುಕಿರುತ್ತೇನೆಯೋ ಎಂಬುದು ಗೊತ್ತಿಲ್ಲ. ಹಣದ ಅಗತ್ಯವಿಲ್ಲ. ಹಣ ಮಾಡುವ ಹುಚ್ಚೂ ಇಲ್ಲ. ಮಹಾತ್ಮ ಗಾಂಧೀಜಿಯವರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ಸರ್ಕಾರವನ್ನು ಮುನ್ನಡೆಸಿ ಬಡ ಕುಟುಂಬಗಳಿಗೆ ಸ್ಪಂದಿಸುವ ರೀತಿ ಆಡಳಿತ ನಡೆಸಲಾಗುವುದು ಎಂದರು. ಮಹಾತ್ಮಗಾಂಧೀಜಿ ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಸರ್ಕಾರ ನಡೆಯಲಿದೆ ಎಂದು ಹೇಳಿದರು.

ಗಾಂಧಿ ತತ್ವಗಳನ್ನು ಮರೆಯುತ್ತಿರುವ ಕೆಟ್ಟ ದಿನಗಳು, ಅಶಾಂತಿ, ಹಿಂಸೆ ಕಾಣುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಯುವ ಪೀಳಿಗೆಗೆ ಮಾನವೀಯ ಮೌಲ್ಯ ಪುನರ್ ಪ್ರತಿಷ್ಠಾಪಿಸಲು ಹಿರಿಯರ ಮಾರ್ಗದರ್ಶನ ಅಗತ್ಯ ಎಂದು ಹೇಳಿದರು. ದೇವರ ಕೃಪೆಯಿಂದ ಎರಡನೇ ಬಾರಿಗೆ ಸಮ್ಮಿಶ್ರ ಸರ್ಕಾರ ಮುನ್ನಡೆಸುವ ಜವಾಬ್ದಾರಿ ತಮ್ಮ ಮೇಲಿದೆ. ರಾಜಕೀಯ ಬದಿಗಿಟ್ಟು ರಾಜ್ಯದ ಅಭಿವೃದ್ಧಿಗೆ ಸರ್ಕಾರದೊಂದಿಗೆ ಸಹಕರಿಸಿ. ಸರ್ಕಾರ ಐದು ವರ್ಷ ಸುಭದ್ರವಾಗಿ ಉತ್ತಮ ಆಡಳಿತ ನೀಡಲಿದೆ ಎಂದರು.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago