ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ , ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ : ಸಿ.ಟಿ. ರವಿ ಆರೋಪ – vishwanews24

Featured, ರಾಜ್ಯ ನ್ಯೂಸ್

ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು : ಸಿ.ಟಿ. ರವಿ ಆರೋಪ

ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಗೈ ಹುಣ್ಣಿಗೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲವೋ ಹಾಗೆ ಕಾಂಗ್ರೆಸ್ ಭ್ರಷ್ಟಾಚಾರ ನೋಡುವುದಕ್ಕೆ ನಾವು ಸ್ಕ್ಯಾನ್ ಮಾಡುವ ಅವಶ್ಯಕತೆ ಇಲ್ಲ; ಕಣ್ಣಿಗೆ ಕಾಣುತ್ತದೆ ಎಂದು ನುಡಿದರು.

ಕಾಂಗ್ರೆಸ್ ಶಾಸಕರಾದ ಬಿ.ಆರ್ ಪಾಟೀಲ್ ಅವರ ಹೇಳಿಕೆಯಲ್ಲದೆ ಎಲ್ಲ ವಿಷಯವು ಕಣ್ಣಿಗೆ ಕಾಣುತ್ತದೆ. ಮೋಹನ್ ದಾಸ್ ಪೈ ರವರು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬಿಲ್ಡರ್ಸ್‍ಗಳ ಕಷ್ಟ ಏನು ಎನ್ನುವುದನ್ನು ಅವರಿಗೆ ಆದ ಅನುಭವದ ಆಧಾರದಲ್ಲಿ ವ್ಯಕ್ತಪಡಿಸಿದರು. ಇವತ್ತು ಪ್ಲಾನ್ ಮಂಜೂರು ಮಾಡಬೇಕಾದರೆ ಒಂದು ಅಡಿಗೆ 100 ರೂ ಕೊಡಬೇಕು, ಭೂ ಬದಲಾವಣೆ ಮಾಡಬೇಕಾದರೆ 25 ಲಕ್ಷ ರೂ ಅನ್ನು ಒಂದು ಎಕರೆ ಜಮೀನಿಗೆ ಕೊಡಬೇಕು. ಕಾಂಗ್ರೆಸ್ ಸರ್ಕಾರ ಎಲ್ಲದರಲ್ಲೂ ಲಂಚ ಪಡೆಯುತ್ತಿದೆ ಎಂದು ಆರೋಪಿಸಿದರು.

ಕಾಪು : ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಧರಣಿ ಸತ್ಯಾಗ್ರಹದೊಂದಿಗೆ ಪ್ರತಿಭಟನೆ – vishwanews24

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಲಂಚ ಕೊಟ್ಟರೆ ಮಾತ್ರ ಮೊದಲು ಅನುದಾನ ಸಿಗುತ್ತದೆ. ಇದು ಕೇವಲ ಅಡ್ವಾನ್ಸ್; ಬಿಲ್ಲು ಮಾಡಿಸಿಕೊಳ್ಳಲು ಪ್ರತ್ಯೇಕ, ಎನ್‍ಓಸಿ ತೆಗೆದುಕೊಳ್ಳುವುದಕ್ಕೆ ಪ್ರತ್ಯೇಕ, ಕಾಮಗಾರಿ ತೆಗೆದುಕೊಳ್ಳಲು ಲಂಚ ಕೊಡಬೇಕು. ಯಾವ ಇಲಾಖೆಯಲ್ಲೂ ಭ್ರಷ್ಟಾಚಾರ ಬಿಟ್ಟಿಲ್ಲ. ರಕ್ತ ಹೀರುತ್ತಿದ್ದಾರೆ, ಜಿಗಣೆಯಾದರೆ ರಕ್ತವನ್ನು ಹೀರಿ ಬಿಡುತ್ತದೆ. ಆದರೆ ಇವರು ಹೀರುತ್ತಲೇ ಇದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ಸಿನ ಹಲವಾರು ಶಾಸಕರು ನಮ್ಮ ಕ್ಷೇತ್ರದಲ್ಲಿ ಕಲ್ಲು ಇಡಲು ಆಗುತ್ತಿಲ್ಲ, ಚರಂಡಿ ಮಾಡಲು ಆಗುತ್ತಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಬಹುತೇಕ ಶಾಸಕರ ಒಳ ಸಂಕಟವಿದು. ಕೆಲವರು ಬಾಯಿ ಬಿಟ್ಟು ಹೇಳುತ್ತಾರೆ; ಕೆಲವರು ಬಾಯಿಬಿಟ್ಟು ಹೇಳುವುದಿಲ್ಲ ಇದು ಒಳ ಸಂಕಟ. ಇಂತಹ ಬಹುತೇಕ ಶಾಸಕರು ಇದ್ದಾರೆ. ಆಡಳಿತ ಪಕ್ಷದ ಶಾಸಕರ ಈ ಪರಿಪಾಠ ಆದರೆ ಇನ್ನು ವಿಪಕ್ಷ ಶಾಸಕರ ಗತಿ ಏನು ಆಗಬೇಕೆಂದು ಯೋಚನೆ ಮಾಡಿ ಎಂದು ಹೇಳಿದರು.

ಗಲ್ಫ್ ವಾಯುಪ್ರದೇಶ ಪುನರಾರಂಭ; ದುಬೈ ವಿಮಾನಗಳ ಸಂಚಾರ ಶುರು – vishwanews24

ಆಡಳಿತ ಪಕ್ಷದ ಶಾಸಕರೇ ಈ ಪರಿ ಪರಿತಾಪ ಪಡುತ್ತಿದ್ದಾರೆ. ಇನ್ನು ವಿಪಕ್ಷ ಶಾಸಕರ ಗೋಳು ಇದೆ. ಆದರೆ ಅವರ ಗೋಳು ಹೇಳಿಕೊಂಡರೆ ಪ್ರಯೋಜನವಿಲ್ಲ. ಗೋರ್ಕಲ್ಲ ಮೇಲೆ ಮಳೆ ಸುರಿದಂತೆ- ಸರ್ವಜ್ಞ ಎಂಬಂತೆ ಆಗಿದೆ ಎಂದು ಟೀಕಿಸಿದರು.

Leave a Reply