ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಗೈ ಹುಣ್ಣಿಗೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲವೋ ಹಾಗೆ ಕಾಂಗ್ರೆಸ್ ಭ್ರಷ್ಟಾಚಾರ ನೋಡುವುದಕ್ಕೆ ನಾವು ಸ್ಕ್ಯಾನ್ ಮಾಡುವ ಅವಶ್ಯಕತೆ ಇಲ್ಲ; ಕಣ್ಣಿಗೆ ಕಾಣುತ್ತದೆ ಎಂದು ನುಡಿದರು.
ಕಾಂಗ್ರೆಸ್ ಶಾಸಕರಾದ ಬಿ.ಆರ್ ಪಾಟೀಲ್ ಅವರ ಹೇಳಿಕೆಯಲ್ಲದೆ ಎಲ್ಲ ವಿಷಯವು ಕಣ್ಣಿಗೆ ಕಾಣುತ್ತದೆ. ಮೋಹನ್ ದಾಸ್ ಪೈ ರವರು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬಿಲ್ಡರ್ಸ್ಗಳ ಕಷ್ಟ ಏನು ಎನ್ನುವುದನ್ನು ಅವರಿಗೆ ಆದ ಅನುಭವದ ಆಧಾರದಲ್ಲಿ ವ್ಯಕ್ತಪಡಿಸಿದರು. ಇವತ್ತು ಪ್ಲಾನ್ ಮಂಜೂರು ಮಾಡಬೇಕಾದರೆ ಒಂದು ಅಡಿಗೆ 100 ರೂ ಕೊಡಬೇಕು, ಭೂ ಬದಲಾವಣೆ ಮಾಡಬೇಕಾದರೆ 25 ಲಕ್ಷ ರೂ ಅನ್ನು ಒಂದು ಎಕರೆ ಜಮೀನಿಗೆ ಕೊಡಬೇಕು. ಕಾಂಗ್ರೆಸ್ ಸರ್ಕಾರ ಎಲ್ಲದರಲ್ಲೂ ಲಂಚ ಪಡೆಯುತ್ತಿದೆ ಎಂದು ಆರೋಪಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಲಂಚ ಕೊಟ್ಟರೆ ಮಾತ್ರ ಮೊದಲು ಅನುದಾನ ಸಿಗುತ್ತದೆ. ಇದು ಕೇವಲ ಅಡ್ವಾನ್ಸ್; ಬಿಲ್ಲು ಮಾಡಿಸಿಕೊಳ್ಳಲು ಪ್ರತ್ಯೇಕ, ಎನ್ಓಸಿ ತೆಗೆದುಕೊಳ್ಳುವುದಕ್ಕೆ ಪ್ರತ್ಯೇಕ, ಕಾಮಗಾರಿ ತೆಗೆದುಕೊಳ್ಳಲು ಲಂಚ ಕೊಡಬೇಕು. ಯಾವ ಇಲಾಖೆಯಲ್ಲೂ ಭ್ರಷ್ಟಾಚಾರ ಬಿಟ್ಟಿಲ್ಲ. ರಕ್ತ ಹೀರುತ್ತಿದ್ದಾರೆ, ಜಿಗಣೆಯಾದರೆ ರಕ್ತವನ್ನು ಹೀರಿ ಬಿಡುತ್ತದೆ. ಆದರೆ ಇವರು ಹೀರುತ್ತಲೇ ಇದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ಸಿನ ಹಲವಾರು ಶಾಸಕರು ನಮ್ಮ ಕ್ಷೇತ್ರದಲ್ಲಿ ಕಲ್ಲು ಇಡಲು ಆಗುತ್ತಿಲ್ಲ, ಚರಂಡಿ ಮಾಡಲು ಆಗುತ್ತಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಬಹುತೇಕ ಶಾಸಕರ ಒಳ ಸಂಕಟವಿದು. ಕೆಲವರು ಬಾಯಿ ಬಿಟ್ಟು ಹೇಳುತ್ತಾರೆ; ಕೆಲವರು ಬಾಯಿಬಿಟ್ಟು ಹೇಳುವುದಿಲ್ಲ ಇದು ಒಳ ಸಂಕಟ. ಇಂತಹ ಬಹುತೇಕ ಶಾಸಕರು ಇದ್ದಾರೆ. ಆಡಳಿತ ಪಕ್ಷದ ಶಾಸಕರ ಈ ಪರಿಪಾಠ ಆದರೆ ಇನ್ನು ವಿಪಕ್ಷ ಶಾಸಕರ ಗತಿ ಏನು ಆಗಬೇಕೆಂದು ಯೋಚನೆ ಮಾಡಿ ಎಂದು ಹೇಳಿದರು.
ಆಡಳಿತ ಪಕ್ಷದ ಶಾಸಕರೇ ಈ ಪರಿ ಪರಿತಾಪ ಪಡುತ್ತಿದ್ದಾರೆ. ಇನ್ನು ವಿಪಕ್ಷ ಶಾಸಕರ ಗೋಳು ಇದೆ. ಆದರೆ ಅವರ ಗೋಳು ಹೇಳಿಕೊಂಡರೆ ಪ್ರಯೋಜನವಿಲ್ಲ. ಗೋರ್ಕಲ್ಲ ಮೇಲೆ ಮಳೆ ಸುರಿದಂತೆ- ಸರ್ವಜ್ಞ ಎಂಬಂತೆ ಆಗಿದೆ ಎಂದು ಟೀಕಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…