ರಾಜ್ಯ ನ್ಯೂಸ್

ಭ್ರಷ್ಟಾಚಾರ ಮುಕ್ತವಾದ 4 ವರ್ಷಗಳ ಪ್ರಧಾನಿ ಮೋದಿಯವರ ಆಡಳಿತವನ್ನು ನಾನೇಕೆ ಟೀಕಿಸಲಿ..?

ಈ ಹಿಂದೆ ಮೋದಿ ನಾಯಕತ್ವದ ಸರ್ಕಾರದ ಮೇಲೆ ಬಹಳ ನಿರೀಕ್ಷೆಗಳಿತ್ತು. ಆದರೆ ಗಂಗಾ ಶುದ್ದೀಕರಣದಂತಹ ವಿಷಯದಲ್ಲಿ ಅವರು ನಮ್ಮ ನಿರೀಕ್ಷೆ ಮಟ್ಟವನ್ನು ಮುಟ್ಟಲು ವಿಫಲರಾಗಿದ್ದಾರೆ ಎಂಬ ಹೇಳಿಕೆಗಳನ್ನು ಕಳೆದ ವಾರವಷ್ಟೇ ಪೇಜಾವರ ಶ್ರೀಗಳು ಹೇಳಿಕೆ‌ ನೀಡಿದ್ದರು. ಅದು ಮಾಧ್ಯಮಗಳಲ್ಲಿ ಭಾರಿ ಸುದ್ದಿಯಾಗಿತ್ತು.

ಇಂದು ಮೈಸೂರಿನಲ್ಲಿ ಮಾತನಾಡಿರುವ ಉಡುಪಿ ಮಠದ ವಿಶ್ವೇಶತೀರ್ಥ ಪೇಜಾವರ ಶ್ರೀಗಳು ನಾನು ಪ್ರಧಾನಿಯವರನ್ನು ಟೀಕಿಸಿಲ್ಲ ಬದಲಾಗಿ ಹೊಗಳಿದ್ದೇನೆ. ಭ್ರಷ್ಟಾಚಾರ ನಿಯಂತ್ರಣಕ್ಕೆ, ಹೊಸ ಹೊಸ ಕಾಯಿದೆ, ಕಾನೂನು ರೂಪಸಿದ್ದಾರೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾಲ್ಕು ವರ್ಷಗಳ ಆಡಳಿತವನ್ನು ಭ್ರಷ್ಟಾಚಾರ ಮುಕ್ತವಾಗಿ ನಡೆಸಿದ್ದಾರೆ. ಅನ್ಯ ದೇಶಗಳ ಜೊತೆಗೆ ಉತ್ತಮ ಸಂಬಂಧ ವೃದ್ದಿಸಿದ್ದಾರೆ. ದೇಶದ ಆರ್ಥಿಕತೆಯನ್ನು ಸರಿದಾರಿಯಲ್ಲಿ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಕ್ತಿ ಮೀರಿ ಶ್ರಮಿಸುತಿದ್ದಾರೆ. ಗಂಗಾ ಶುದ್ಧೀಕರಣದ ಬಗ್ಗೆ ಸ್ಥಳಿಯರ ಅಭಿಪ್ರಾಯ ಉಲ್ಲೇಖಿಸಿದ್ದೇನೆ. ವಿದೇಶದಲ್ಲಿನ ಕಪ್ಪು ಹಣ ತರುವ ವಿಚಾರದಲ್ಲಿ ಪ್ರಗತಿಯಾಗಿಲ್ಲ. ಈ ಎರಡೂ ವಿಚಾರಗಳನ್ನು ಹೇಳಿರುವುದು ಮಾತ್ರ ಸತ್ಯ. ಆದರೆ ಪ್ರಧಾನಿಯವರನ್ನು ನಾನು ಎಲ್ಲಿಯೂ ಟೀಕಿಸಿಲ್ಲ ಎಂದು ತಿಳಿಸಿದ್ದಾರೆ.

ಈ ಬಾರಿಯೂ ಇಫ್ತಾರ್ ಕೂಟ..!! ಈ ಬಾರಿ ಸಹ ಮಠದಲ್ಲಿ ಇಫ್ತಾರ್ ಕೂಟ ಆಯೋಜಿಸಲು ನಾನು ಉತ್ಸುಕನಾಗಿದ್ದೇನೆ. ಆದರೆ ಮುಸ್ಲಿಮರೇ ಆಸಕ್ತಿ ತೋರುತ್ತಿಲ್ಲ. ಕಳೆದ ಬಾರಿ ಭಾರೀ ವಿವಾದಗಳುಂಟಾಗಿದ್ದ ಕಾರಣ ಅವರು ಹಿಂಜರಿಯುತ್ತಿದ್ದಾರೆ. ಮೂರ್ತಿಪೂಜೆ ನಡೆಯುವಲ್ಲಿ ಪ್ರಾರ್ಥನೆ ಸಲ್ಲಿಸಲು ಅವರು ಹಿಂದೇಟು ಹಾಕುತ್ತಿದ್ದಾರೆ. ಎಂದು ಪೇಜಾವರ ಶ್ರೀಗಳು ಇದೇ ಸಂದರ್ಭದಲ್ಲಿ ಹೇಳಿದರು.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

20 hours ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

21 hours ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

21 hours ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

22 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

22 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

22 hours ago