ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕೇರಳದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೂಚನೆಯಂತೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸ್ಕ್ರೀನಿಂಗ್ ಆರಂಭಿಸಲಾಗಿದೆ.
ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗುತ್ತಿದ್ದು, ಅವರು ತೆರಳುವ ಸ್ಥಳದ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ. ಅಲ್ಲದೇ 10 ಹಾಸಿಗೆಗಳ ವಿಶೇಷ ವಾರ್ಡ್ನ್ನು ಸಹ ಮಂಗಳೂರಿನಲ್ಲಿ ಆರಂಭಿಸಲಾಗಿದೆ. ಇಲ್ಲಿದೆ ಆಕುರಿತು ಅಧಿಕೃತ ಸಂಪೂರ್ಣ ಮಾಹಿತಿ.
ವಿದೇಶಿ ಪ್ರಯಾಣಿಕರ ಬಗ್ಗೆ ನಿಗಾ
ಅಲ್ಲದೇ, ಪ್ರಯಾಣಿಕರು ಆಗಮಿಸುವ ದೇಶದಲ್ಲಿ ಮಂಕಿ ಪಾಕ್ಸ್ ಪ್ರಕರಣಗಳ ಬಗ್ಗೆಯೂ ನಿಗಾ ವಹಿಸುವುದಾಗಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಗೆ ಆಗಮಿಸುವ ವಿದೇಶಿ ಪ್ರಯಾಣಿಕರ ಬಗ್ಗೆ ನಿಗಾವಿರಿಸಿದೆ.
ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್
ಮಂಗಳೂರಿನ ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಶೇಷ ವಾರ್ಡ್ ತೆರೆಯಲಾಗಿದೆ. 10 ಹಾಸಿಗೆಯುಳ್ಳ ವಾರ್ಡ್ನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣದ ಸೋಂಕಿತರ ಮೇಲೆ ನಿಗಾ ಇಡಲು ನಿರ್ಧರಿಸಿದೆ. ಆದರೆ, ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಮಂಕಿ ಪಾಕ್ಸ್ ಲಕ್ಷಣ ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ರೋಗ ಲಕ್ಷಣಗಳಿವು
ಬೊಕ್ಕೆ ಮಾದರಿಯಲ್ಲಿ ಕಾಣುವ ಗುಳ್ಳೆಗಳು ಮೊದಲಿಗೆ ದೇಹದ ಹೊರಗೆ ಕಾಣಿಸಿಕೊಂಡರೆ ಬಳಿಕ ಜ್ವರ ಹೆಚ್ಚುತ್ತಿದ್ದಂತೆ ಕಣ್ಣು, ಬಾಯಿ, ಶ್ವಾಸಕೋಶಕ್ಕೂ ಲಗ್ಗೆಯಿಟ್ಟು ಘಾಸಿ ಉಂಟು ಮಾಡುತ್ತದೆ. ಅಲ್ಲದೇ, ಮಂಕಿಪಾಕ್ಸ್ ಸೋಂಕಿತರಲ್ಲಿ ಜ್ವರ, ಸ್ನಾಯು ನೋವು, ಶೀತಗಳು ಕಂಡು ಬರುತ್ತವೆ.
ಪರಿಹಾರವೇನು?
ಸಾರ್ವಜನಿಕರು ಕೋವಿಡ್ ಸಮಯದಲ್ಲಿ ಪಾಲಿಸಿದಂತಹ ಮಾರ್ಗಸೂಚಿಗಳನ್ನು ಇಲ್ಲಿಯೂ ಪಾಲಿಸಬೇಕಾಗುತ್ತದೆ. ಆದರೆ, ಕೋವಿಡ್ ನಂತೆ ವೇಗವಾಗಿ ಈ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದಿಲ್ಲ. ಅದಾಗ್ಯೂ, ಜನರು ಸೋಂಕಿತರಿಂದ ಅಂತರ ಕಾಯುವುದು, ಕೈಗಳಿಗೆ ಸೋಪ್ ಅಥವಾ ಸ್ಯಾನಿಟೈಸರ್ ಬಳಸುವುದು. ಮತ್ತು ಸೋಂಕಿತರ ಬಳಿಗೆ ತೆರಳುವಾಗ ರಕ್ಷಣಾ ಕವಚಗಳನ್ನು ಧರಿಸಬೇಕಾಗುತ್ತದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಥರ್ಮಲ್ ಸ್ಕ್ರೀನಿಂಗ್ ಆರಂಭಿಸಲಾಗಿದೆ. ಇನ್ನೊಂದೆಡೆ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…