Featured

ಮಂಕಿಪಾಕ್ಸ್ ಆತಂಕ; ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 10 ಬೆಡ್​ಗಳ ವಿಶೇಷ ವಾರ್ಡ್ ಆರಂಭ – Vishwanews24

ಮಂಕಿಪಾಕ್ಸ್ ಆತಂಕ; ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 10 ಬೆಡ್​ಗಳ ವಿಶೇಷ ವಾರ್ಡ್ ಆರಂಭ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕೇರಳದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಸೋಂಕು  ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೂಚನೆಯಂತೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸ್ಕ್ರೀನಿಂಗ್ ಆರಂಭಿಸಲಾಗಿದೆ.

ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗುತ್ತಿದ್ದು, ಅವರು ತೆರಳುವ ಸ್ಥಳದ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ. ಅಲ್ಲದೇ 10 ಹಾಸಿಗೆಗಳ ವಿಶೇಷ ವಾರ್ಡ್​ನ್ನು ಸಹ ಮಂಗಳೂರಿನಲ್ಲಿ ಆರಂಭಿಸಲಾಗಿದೆ. ಇಲ್ಲಿದೆ ಆಕುರಿತು ಅಧಿಕೃತ ಸಂಪೂರ್ಣ ಮಾಹಿತಿ.

ವಿದೇಶಿ ಪ್ರಯಾಣಿಕರ ಬಗ್ಗೆ ನಿಗಾ
ಅಲ್ಲದೇ, ಪ್ರಯಾಣಿಕರು ಆಗಮಿಸುವ ದೇಶದಲ್ಲಿ ಮಂಕಿ ಪಾಕ್ಸ್ ಪ್ರಕರಣಗಳ ಬಗ್ಗೆಯೂ ನಿಗಾ ವಹಿಸುವುದಾಗಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಗೆ ಆಗಮಿಸುವ ವಿದೇಶಿ ಪ್ರಯಾಣಿಕರ ಬಗ್ಗೆ ನಿಗಾವಿರಿಸಿದೆ.

ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್
ಮಂಗಳೂರಿನ ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಶೇಷ ವಾರ್ಡ್ ತೆರೆಯಲಾಗಿದೆ. 10 ಹಾಸಿಗೆಯುಳ್ಳ ವಾರ್ಡ್​ನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣದ ಸೋಂಕಿತರ ಮೇಲೆ ನಿಗಾ ಇಡಲು ನಿರ್ಧರಿಸಿದೆ. ಆದರೆ, ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಮಂಕಿ ಪಾಕ್ಸ್ ಲಕ್ಷಣ ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.

ರೋಗ ಲಕ್ಷಣಗಳಿವು
ಬೊಕ್ಕೆ ಮಾದರಿಯಲ್ಲಿ ಕಾಣುವ ಗುಳ್ಳೆಗಳು ಮೊದಲಿಗೆ ದೇಹದ ಹೊರಗೆ ಕಾಣಿಸಿಕೊಂಡರೆ ಬಳಿಕ ಜ್ವರ ಹೆಚ್ಚುತ್ತಿದ್ದಂತೆ ಕಣ್ಣು, ಬಾಯಿ, ಶ್ವಾಸಕೋಶಕ್ಕೂ ಲಗ್ಗೆಯಿಟ್ಟು ಘಾಸಿ ಉಂಟು ಮಾಡುತ್ತದೆ. ಅಲ್ಲದೇ, ಮಂಕಿಪಾಕ್ಸ್ ಸೋಂಕಿತರಲ್ಲಿ ಜ್ವರ, ಸ್ನಾಯು ನೋವು, ಶೀತಗಳು ಕಂಡು ಬರುತ್ತವೆ.

ಪರಿಹಾರವೇನು?
ಸಾರ್ವಜನಿಕರು ಕೋವಿಡ್ ಸಮಯದಲ್ಲಿ ಪಾಲಿಸಿದಂತಹ ಮಾರ್ಗಸೂಚಿಗಳನ್ನು ಇಲ್ಲಿಯೂ ಪಾಲಿಸಬೇಕಾಗುತ್ತದೆ. ಆದರೆ, ಕೋವಿಡ್ ನಂತೆ ವೇಗವಾಗಿ ಈ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದಿಲ್ಲ. ಅದಾಗ್ಯೂ, ಜನರು ಸೋಂಕಿತರಿಂದ ಅಂತರ ಕಾಯುವುದು, ಕೈಗಳಿಗೆ ಸೋಪ್ ಅಥವಾ ಸ್ಯಾನಿಟೈಸರ್ ಬಳಸುವುದು. ಮತ್ತು ಸೋಂಕಿತರ ಬಳಿಗೆ ತೆರಳುವಾಗ ರಕ್ಷಣಾ ಕವಚಗಳನ್ನು ಧರಿಸಬೇಕಾಗುತ್ತದೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಥರ್ಮಲ್ ಸ್ಕ್ರೀನಿಂಗ್ ಆರಂಭಿಸಲಾಗಿದೆ. ಇನ್ನೊಂದೆಡೆ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

14 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

14 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago