ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕೇರಳದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೂಚನೆಯಂತೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸ್ಕ್ರೀನಿಂಗ್ ಆರಂಭಿಸಲಾಗಿದೆ.
ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗುತ್ತಿದ್ದು, ಅವರು ತೆರಳುವ ಸ್ಥಳದ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ. ಅಲ್ಲದೇ 10 ಹಾಸಿಗೆಗಳ ವಿಶೇಷ ವಾರ್ಡ್ನ್ನು ಸಹ ಮಂಗಳೂರಿನಲ್ಲಿ ಆರಂಭಿಸಲಾಗಿದೆ. ಇಲ್ಲಿದೆ ಆಕುರಿತು ಅಧಿಕೃತ ಸಂಪೂರ್ಣ ಮಾಹಿತಿ.
ವಿದೇಶಿ ಪ್ರಯಾಣಿಕರ ಬಗ್ಗೆ ನಿಗಾ
ಅಲ್ಲದೇ, ಪ್ರಯಾಣಿಕರು ಆಗಮಿಸುವ ದೇಶದಲ್ಲಿ ಮಂಕಿ ಪಾಕ್ಸ್ ಪ್ರಕರಣಗಳ ಬಗ್ಗೆಯೂ ನಿಗಾ ವಹಿಸುವುದಾಗಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಗೆ ಆಗಮಿಸುವ ವಿದೇಶಿ ಪ್ರಯಾಣಿಕರ ಬಗ್ಗೆ ನಿಗಾವಿರಿಸಿದೆ.
ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್
ಮಂಗಳೂರಿನ ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಶೇಷ ವಾರ್ಡ್ ತೆರೆಯಲಾಗಿದೆ. 10 ಹಾಸಿಗೆಯುಳ್ಳ ವಾರ್ಡ್ನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣದ ಸೋಂಕಿತರ ಮೇಲೆ ನಿಗಾ ಇಡಲು ನಿರ್ಧರಿಸಿದೆ. ಆದರೆ, ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಮಂಕಿ ಪಾಕ್ಸ್ ಲಕ್ಷಣ ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ರೋಗ ಲಕ್ಷಣಗಳಿವು
ಬೊಕ್ಕೆ ಮಾದರಿಯಲ್ಲಿ ಕಾಣುವ ಗುಳ್ಳೆಗಳು ಮೊದಲಿಗೆ ದೇಹದ ಹೊರಗೆ ಕಾಣಿಸಿಕೊಂಡರೆ ಬಳಿಕ ಜ್ವರ ಹೆಚ್ಚುತ್ತಿದ್ದಂತೆ ಕಣ್ಣು, ಬಾಯಿ, ಶ್ವಾಸಕೋಶಕ್ಕೂ ಲಗ್ಗೆಯಿಟ್ಟು ಘಾಸಿ ಉಂಟು ಮಾಡುತ್ತದೆ. ಅಲ್ಲದೇ, ಮಂಕಿಪಾಕ್ಸ್ ಸೋಂಕಿತರಲ್ಲಿ ಜ್ವರ, ಸ್ನಾಯು ನೋವು, ಶೀತಗಳು ಕಂಡು ಬರುತ್ತವೆ.
ಪರಿಹಾರವೇನು?
ಸಾರ್ವಜನಿಕರು ಕೋವಿಡ್ ಸಮಯದಲ್ಲಿ ಪಾಲಿಸಿದಂತಹ ಮಾರ್ಗಸೂಚಿಗಳನ್ನು ಇಲ್ಲಿಯೂ ಪಾಲಿಸಬೇಕಾಗುತ್ತದೆ. ಆದರೆ, ಕೋವಿಡ್ ನಂತೆ ವೇಗವಾಗಿ ಈ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದಿಲ್ಲ. ಅದಾಗ್ಯೂ, ಜನರು ಸೋಂಕಿತರಿಂದ ಅಂತರ ಕಾಯುವುದು, ಕೈಗಳಿಗೆ ಸೋಪ್ ಅಥವಾ ಸ್ಯಾನಿಟೈಸರ್ ಬಳಸುವುದು. ಮತ್ತು ಸೋಂಕಿತರ ಬಳಿಗೆ ತೆರಳುವಾಗ ರಕ್ಷಣಾ ಕವಚಗಳನ್ನು ಧರಿಸಬೇಕಾಗುತ್ತದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಥರ್ಮಲ್ ಸ್ಕ್ರೀನಿಂಗ್ ಆರಂಭಿಸಲಾಗಿದೆ. ಇನ್ನೊಂದೆಡೆ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…