ಮಂಗಳವಾರದ ರಾಶಿ ಭವಿಷ್ಯ ಇಲ್ಲಿದೆ ಓದಿ: vishwanews24

ಮೇಷ ರಾಶಿ

ಉದ್ಯೋಗಸ್ಥರಿಗೆ ನಂಬಲಸಾಧ್ಯವಾದಂಥ ಬೆಳವಣಿಗೆಗಳು ನಡೆಯುತ್ತವೆ. ಒತ್ತಡದ ಸನ್ನಿವೇಶದಲ್ಲೂ ಅದ್ಭುತವಾದ ಕೆಲಸವನ್ನು ಮಾಡಲಿದ್ದೀರಿ. ತಾಳ್ಮೆಯಿಂದ ವರ್ತಿಸಿದರೆ ಅಂದುಕೊಂಡ ಕೆಲಸವನ್ನು ಇನ್ನಷ್ಟು ಉತ್ಸಾಹದಿಂದ ಮಾಡಲು ಸಾಧ್ಯವಾಗುತ್ತದೆ. ಆದಾಯ ಮೂಲವನ್ನು ಹೆಚ್ಚು ಮಾಡಿಕೊಳ್ಳಲು ಪ್ರಯತ್ನ ಆರಂಭಿಸಲಿದ್ದೀರಿ.

ವೃಷಭ ರಾಶಿ

ಮೌನವಾಗಿದ್ದು ಕೆಲಸಗಳನ್ನು ಪೂರ್ತಿ ಮಾಡಿಕೊಳ್ಳುವಂಥ ದಿನ ಇದು. ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ವಾಸ್ತವ ನೆಲೆಗಟ್ಟಿನಲ್ಲಿ ನಿಂತು, ಆಲೋಚನೆ ಮಾಡಿ. ಭಾವನಾತ್ಮಕವಾಗಿ ಆಲೋಚಿಸಿದರೆ ಕೆಲಸಗಳು ವಿಳಂಬ ಆಗುವ ಸಾಧ್ಯತೆ ಇದೆ. ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ.

ಮಿಥುನ ರಾಶಿ

ನೀವಾಗಿಯೇ ಆರಿಸಿಕೊಂಡ ದಾರಿಯಲ್ಲಿ ಸಾಗುವುದು ಸವಾಲು ಎಂದೆನಿಸಬಹುದು. ಬಂಧುಗಳು, ಸ್ನೇಹಿತರ ಅಗತ್ಯಗಳಿಗಾಗಿ ನಿಮ್ಮ ಉಳಿತಾಯದ ಹಣವನ್ನು ತೆಗೆಯಬೇಕಾದ ಸನ್ನಿವೇಶ ಸೃಷ್ಟಿಯಾಗಬಹುದು. ಸಂಗಾತಿ- ಮಕ್ಕಳಿಗೆ ಮುಖ್ಯ ಎನಿಸಿದ ಸಂಗತಿಗಳು ನಿಮಗೆ ಮುಖ್ಯವಲ್ಲ ಎನಿಸಬಹುದು. ಇದರಿಂದ ತಿಕ್ಕಾಟಕ್ಕೆ ಕಾರಣ ಆಗಬಹುದು.

ಕರ್ಕಾಟಕ ರಾಶಿ

ಎಲ್ಲವೂ ಅಂದುಕೊಂಡಂತೆ ಸಾಗುತ್ತಿದೆ ಎಂದುಕೊಳ್ಳುವಷ್ಟರಲ್ಲಿ ಸಣ್ಣ- ಪುಟ್ಟ ಆತಂಕಗಳು ಎದುರಾಗುತ್ತದೆ. ಆದರೆ ನಿಮ್ಮ ಸಮಯಪ್ರಜ್ಞೆಯಿಂದ ಅವುಗಳನ್ನು ದಾಟಿಕೊಳ್ಳುತ್ತೀರಿ. ಕಲಾವಿದರಿಗೆ ಹೊಸ ಅವಕಾಶಗಳು ಸಿಗಲಿವೆ. ಆದರೆ ಗಟ್ಟಿಯಾದ ಪ್ರಯತ್ನ ಬೇಕು. ಅಗತ್ಯ ಬಿದ್ದಲ್ಲಿ ಇತರರ ನೆರವು ಪಡೆಯಿರಿ.

ಸಿಂಹ ರಾಶಿ

ಹೆಚ್ಚುವರಿ ಆದಾಯ ಮೂಲದಿಂದ ಲಾಭದ ಪ್ರಮಾಣ ಹೆಚ್ಚಾಗಲಿದೆ. ನಿಮ್ಮ ಸಾಮರ್ಥ್ಯವನ್ನು ಗುರುತಿಸಿ, ಹೆಚ್ಚಿನ ಜವಾಬ್ದಾರಿ ನೀಡಲಾಗುತ್ತದೆ. ಸ್ನೇಹಿತರು- ಸಂಬಂಧಿಕರು ಔತಣ ಕೂಟಕ್ಕೆ ಆಹ್ವಾನ ನೀಡಬಹುದು. ಕಚೇರಿ ಅಥವಾ ಮನೆ ಬದಲಾವಣೆಗೆ ಪ್ರಯತ್ನ ಮಾಡಲಿದ್ದೀರಿ.

ಕನ್ಯಾ ರಾಶಿ

ವಾಹನ, ಮನೆ ಖರೀದಿಗೆ ಸಾಲ ಪಡೆಯಲು ಪ್ರಯತ್ನ ಮಾಡಲಿದ್ದೀರಿ. ವೃತ್ತಿನಿರತರಿಗೆ ಹೊಸ ಪರಿಚಯಗಳಿಂದ ಸಹಾಯ ಆಗಲಿದೆ. ನೇರವಂತಿಕೆಗಿಂತ ಆಲೋಚಿಸಿ, ಮಾತನಾಡುವುದು ಬಹಳ ಮುಖ್ಯ. ತಾಯಿಯ ಆರೋಗ್ಯದ ಕಡೆಗೆ ಗಮನ ವಹಿಸಿ. ಹಿರಿಯರ ಸಲಹೆಯನ್ನು ಪಾಲಿಸಿ.

ತುಲಾ ರಾಶಿ

ಇತರರು ಮಾನಸಿಕವಾಗಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲ ಸಂಗತಿಗಳಿಗೂ ಪ್ರತಿಕ್ರಿಯಿಸಬೇಡಿ. ಊಟ- ತಿಂಡಿಯೇ ಆಗಲಿ, ಮಾತೇ ಆಗಲಿ ನಾಲಗೆ ಮೇಲೆ ಹಿಡಿತ ಇರಲಿ. ಅವಿವಾಹಿತರಿಗೆ ಸೂಕ್ತ ವಿವಾಹ ಸಂಬಂಧಗಳು ದೊರೆಯುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ

ಪ್ರೇಮಿಗಳಿಗೆ ಸುಮಧುರ ಕ್ಷಣಗಳನ್ನು ಕಳೆಯುವ ಅವಕಾಶ ದೊರೆಯಲಿದೆ. ಮೇಲಧಿಕಾರಿಯ ಜತೆಗೆ ವಿವಿಧ ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಮೂಡಲಿದೆ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರ ಸಹಕಾರದಿಂದ ಹಲವು ಬಗೆಯಲ್ಲಿ ಅನುಕೂಲ ಒದಗಿ ಬರಲಿದೆ. ಸ್ವಾದಿಷ್ಟವಾದ ಆಹಾರ ಸವಿಯುವ ಯೋಗ ಇದೆ.

ಧನಸ್ಸು ರಾಶಿ

ಸ್ವಂತ ಮನೆಯಿರುವವರು ದುರಸ್ತಿ ಹಾಗೂ ಗೃಹಾಲಂಕಾರಕ್ಕೆ ಹೆಚ್ಚಿನ ಖರ್ಚು ಮಾಡಲಿದ್ದೀರಿ. ವಾಹನ ಚಾಲನೆ ಮಾಡುವವರು ಬಹಳ ಎಚ್ಚರಿಕೆಯಿಂದ ಇರಬೇಕು. ನಾನು ಮಾಡಿದ್ದೆಲ್ಲ ಸರಿ ಎಂಬ ಧೋರಣೆ ಒಳ್ಳೆಯದಲ್ಲ. ಹಳೇ ಜಗಳವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರ ಜತೆಗೂ ವೈಮನಸ್ಯ ಮಾಡಿಕೊಳ್ಳಬೇಡಿ.

ಮಕರ ರಾಶಿ

ಮಕರ ರಾಶಿ

ಸಂಗಾತಿಯ ಅಗತ್ಯ ಹಾಗೂ ಆಸೆಗಳನ್ನು ಪೂರೈಸುವ ಸಲುವಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಭವಿಷ್ಯದ ಬಗ್ಗೆ ಇರುವ ಆತಂಕ ದೂರ ಆಗುವ ಸಾಧ್ಯತೆ ಇದೆ. ಮಧುಮೇಹ, ರಕ್ತದೊತ್ತಡದಂಥ ಸಮಸ್ಯೆ ಇರುವವರು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಅಗತ್ಯ ಇದ್ದಲ್ಲಿ ಸೂಕ್ತ ವೈದ್ಯರಿಂದ ಚಿಕಿತ್ಸೆ ಪಡೆಯಿರಿ.

ಕುಂಭ ರಾಶಿ

ಯಾರದೋ ಮೇಲಿನ ಸಿಟ್ಟಿಗೆ ಇನ್ಯಾರ ಮೇಲೋ ಆಕ್ರೋಶ ವ್ಯಕ್ತಪಡಿಸುವುದು ಸರಿಯಲ್ಲ. ಸಾಧ್ಯವಾದಷ್ಟೂ ಈ ದಿನ ನೀವು- ನಿಮ್ಮ ಕೆಲಸ ಎಂಬಂತೆ ಇದ್ದುಬಿಡುವುದು ಉತ್ತಮ. ಬೇಡದ ವಾದ- ವಿವಾದಗಳನ್ನು ಮೈ ಮೇಲೆ ಎಳೆದುಕೊಂಡರೆ ಮಾನಸಿಕ ನೆಮ್ಮದಿ ಹಾಳಾಗುತ್ತದೆ.

ಮೀನ ರಾಶಿ

ರಾಜಕಾರಣ, ಸಾಮಾಜಿಕ ಜೀವನದಲ್ಲಿ ಇರುವವರಿಗೆ ಬಿಡುವಿಲ್ಲದ ದಿನವಾಗಿರುತ್ತದೆ. ಮನರಂಜನೆಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಹೋಟೆಲ್, ರೆಸ್ಟೋರೆಂಟ್ ಗಳಿಗೆ ಕುಟುಂಬದ ಸಮೇತ ತೆರಳಲಿದ್ದೀರಿ. ವೃತ್ತಿಪರ ಕಾರಣಗಳಿಗಾಗಿ ದೂರ ಪ್ರಯಾಣ ಮಾಡುವ ಯೋಗ ಇದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago